ಮನೆ ಸುದ್ದಿ ಜಾಲ ಇಂದು ತುಮಕೂರು ದಸರಾ ಉದ್ಘಾಟಿಸಿದ ಜಿ.ಪರಮೇಶ್ವರ್

ಇಂದು ತುಮಕೂರು ದಸರಾ ಉದ್ಘಾಟಿಸಿದ ಜಿ.ಪರಮೇಶ್ವರ್

0

ತುಮಕೂರು : ನಂದಿ ಧ್ವಜ ಪೂಜೆ ಮಾಡುವ ಮೂಲಕ ತುಮಕೂರು ದಸರಾವನ್ನು ಗೃಹಸಚಿವ ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು.

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ದಸರಾ ಧ್ವಜಾರೋಹಣ ಮಾಡಿ, ಬಳಿಕ ಧಾರ್ಮಿಕ ಮಂಟಪವನ್ನು ಉದ್ಘಾಟನೆ ಮಾಡಿದರು.

ಪತ್ನಿ ಕನ್ನಿಕಾ ಪರಮೇಶ್ವರ್, ಕೇಂದ್ರ ಸಚಿವ ವಿ ಸೋಮಣ್ಣ, ಶಾಸಕ ಜ್ಯೋತಿಗಣೇಶ್, ಸುರೇಶ್ ಗೌಡ, ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹನುಮಂತನಾಥ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ದಸರಾ ಉತ್ಸವವು ಸೆ. 22ರಿಂದ ಅ.2ರವರೆಗೆ 11 ದಿನಗಳ ಕಾಲ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಈ ಉತ್ಸವವನ್ನು ನೋಡಲು ಸಾರ್ವಜನಿಕರಿಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪ್ರತೀ ದಿನ 250 ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.