ಮನೆ ರಾಜ್ಯ ಶಾಸಕರ ಉಚ್ಚಾಟನೆ ಕೋರ್ ಕಮಿಟಿ ನಿರ್ಧಾರ: ಹೆಚ್‌.ಡಿ.ಕುಮಾರಸ್ವಾಮಿ

ಶಾಸಕರ ಉಚ್ಚಾಟನೆ ಕೋರ್ ಕಮಿಟಿ ನಿರ್ಧಾರ: ಹೆಚ್‌.ಡಿ.ಕುಮಾರಸ್ವಾಮಿ

0

ಬೆಂಗಳೂರು (Bengaluru): ಶಾಸಕರ ಉಚ್ಚಾಟನೆ ಕೋರ್ ಕಮಿಟಿ ನಿರ್ಧಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಗುಬ್ಬಿ ಶ್ರೀನಿವಾಸ್ ಮತ್ತು ಕೆ.ಶ್ರೀನಿವಾಸಗೌಡ ಉಚ್ಚಾಟನೆ ಮಾಡಿರುವುದು ಕೋರ್ ಕಮಿಟಿ ನಿರ್ಧಾರ. ಪಕ್ಷದ ವಿರುದ್ದ ಅಡ್ಡ ಮತದಾನ ಮಾಡಿದ್ದಕ್ಕೆ ಉಚ್ಚಾಟನೆ ಮಾಡಲಾಗಿದೆ ಎಂದು ಹೇಳಿದರು.
ಈ ಸಂಬಂಧ ಕೋರ್ಟ್ ಗೆ ಹೋಗುವುದು ಅಥವಾ ವಿಧಾನಸಭೆ ಸ್ಪೀಕರ್ ಗೆ ದೂರು ನೀಡುವುದರಿಂದ ಏನು ಆಗದು. ಈಗ ಇರುವ ಪಕ್ಷಾಂತರ ನಿಷೇಧ ಕಾಯ್ದೆ ಯಶಸ್ವಿಯಾಗುವುದಿಲ್ಲ. ಮೊದಲು ಈ ವ್ಯವಸ್ಥೆ ಬದಲಾವಣೆ ಆಗಬೇಕು. ನಮ್ಮ ಸರಕಾರ ಬಂದರೆ ಈ ಕಾನೂನುಗಳಿಗೆ ಬಲ ಕೊಡುವ ಕೆಲಸ ಮಾಡಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.