ನವದೆಹಲಿ(New Delhi): ಜುಲೈ 18 ರಂದು ನಡೆಯಲಿರು ರಾಷ್ಟ್ರಪತಿ ಆಯ್ಕೆ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿ ಹಾಕಿದರು.
ದೆಹಲಿಯ ಕರ್ನಾಟಕ ಭವನದಿಂದ ಸಂಸತ್ ಭವನಕ್ಕೆ ತೆರಳಿದ ಸಿಎಂ ಬೊಮ್ಮಾಯಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಬಿ ಶ್ರೀರಾಮುಲು, ಸಂಸದರಾದ ಶಿವಕುಮಾರ ಉದಾಸಿ, ಉಮೇಶ ಜಾದವ್ , ಶಾಸಕ ರಾಜುಗೌಡ ಉಪಸ್ಥಿತರಿದ್ದರು.
ದ್ರೌಪದಿ ಮುರ್ಮು ಅವರು ಎನ್ ಡಿಎ ಅಭ್ಯರ್ಥಿಯಾಗಿ ರಾಷ್ಟ್ರಪತಿ ಹುದ್ದೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಾಪಸ್ ಆಗಲಿದ್ದಾರೆ.