ಮನೆ ರಾಜ್ಯ ನಡು ರಸ್ತೆಯಲ್ಲಿ ಹೊತ್ತಿ ಉರಿದ ಸ್ಕೂಟರ್​: ಒಬ್ಬನ ಸಾವು

ನಡು ರಸ್ತೆಯಲ್ಲಿ ಹೊತ್ತಿ ಉರಿದ ಸ್ಕೂಟರ್​: ಒಬ್ಬನ ಸಾವು

0

ಮೈಸೂರು(Mysuru): ರಸ್ತೆ ಮಧ್ಯದಲ್ಲಿ ಸ್ಕೂಟರ್ ಹೊತ್ತಿ ಉರಿದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ.

ಶುಕ್ರವಾರ ಸಂಜೆ ಮೈಸೂರು ಮೂಲದ ಶಿವರಾಮು ಹಾಗೂ ಅನಂತ ರಾಮಯ್ಯ ಎಂಬುವರು ಸ್ಕೂಟರ್​​ನಲ್ಲಿ ಕೆ.ಆರ್ ಪೇಟೆ ಕಡೆಗೆ ಹೊರಟಿದ್ದಾಗ ಈ ದುರಂತ ಸಂಭವಿಸಿದೆ.

ರಸ್ತೆ ಮಧ್ಯ ಹೊತ್ತಿ ಉರಿದ ಸ್ಕೂಟರ್ ರಸ್ತೆ ಮಧ್ಯೆ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಾರ್ವಜನಿಕರು ಇಬ್ಬರು ಸವಾರರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶಿವರಾಮು ಎಂಬುವರು ಕಳೆದ ರಾತ್ರಿ ಮೈಸೂರಿನ ಕೆ. ಆರ್ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಇವರಿಬ್ಬರೂ ಮೈಸೂರಿನ ಸಿದ್ದಾರ್ಥ ನಗರದ ನಿವಾಸಿಗಳು ಎನ್ನಲಾಗಿದೆ.