ಮನೆ ರಾಜ್ಯ ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ – ಬಿವೈವಿ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ – ಬಿವೈವಿ

0

ಬೆಂಗಳೂರು : ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಸಂಜೆ ಒಳಗಾಗಿ ರಾಜ್ಯ ಸರ್ಕಾರ ಸ್ಥಳಕ್ಕೆ ಉಸ್ತುವಾರಿ ಸಚಿವರನ್ನಾಗಲಿ, ಸಕ್ಕರೆ ಸಚಿವರನ್ನಾಗಲಿ ಅಥವಾ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಥಳಕ್ಕೆ ಆಗಮಿಸಿ ಕಬ್ಬು ಬೆಳೆಗಾರರ ನ್ಯಾಯಯುತ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ನಾಳೆಯೂ ರೈತರ ಜೊತೆಯಾಗಿ ಹೋರಾಟದಲ್ಲಿ ಧುಮುಕುತ್ತೇನೆ. ನಾಳೆ ನನ್ನ ಜನ್ಮದಿನವಿದ್ದರೂ ಕಣ್ಣೀರು ಸುರಿಸುತ್ತಿರುವ ರೈತರಿಗೆ ನಾಳೆ ಮೀಸಲಿಡುತ್ತೇನೆ. ಒಂದು ವೇಳೆ ನಾಳೆಯು ಬಗೆಹರಿಯದಿದ್ದರೆ ರಾಜ್ಯಾದ್ಯಂತ ರೈತರ ಕಿಡಿ ಹರಡುತ್ತದೆ ಎಂದು ಎಚ್ಚರಿಸಿದರು.