Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Saturday, April 25, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ – ಮೆಟ್ರೋ ಬೋಗಿಗಳ ಪರಿಶೀಲನೆ​​​..!
      ಸ್ಕೂಟರ್‌ಗೆ ಡಿಕ್ಕಿಯಾಗಿ, ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌
      ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? – ವಿಶ್ವನಾಥ್ ಅನುಮಾನ
      ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್
      ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ – ದೇವೇಂದ್ರ ಫಡ್ನವೀಸ್
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ – ಛಲವಾದಿ ನಾರಾಯಣಸ್ವಾಮಿ
      ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ ಖಡಕ್ ಷರತ್ತುಗಳು..!
      ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ತಮ್ಮ ಪವರ್ ಕ್ಲೈಮ್ ಆರಂಭಿಸಿದ್ರಾ..?!
      SSLCಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್​​ ಬಗ್ಗೆ BJP, JDS ಕಿಡಿ
      ಉಪ‌ ಚುನಾವಣೆ ಫಲಿತಾಂಶ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ – ಸತೀಶ ಜಾರಕಿಹೊಳಿ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ಸುಪ್ರೀಂಗೆ ವರದಿ ಸಲ್ಲಿಕೆ..!
  • ರಾಜ್ಯ
  • ರಾಷ್ಟ್ರೀಯ
  • ಸುದ್ದಿ ಜಾಲ

ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ಸುಪ್ರೀಂಗೆ ವರದಿ ಸಲ್ಲಿಕೆ..!

November 12, 2025
0
Share
WhatsApp
Telegram
Facebook
Twitter
Email

    ಕೋಲಾರ : ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಸಾಕಷ್ಟು ಕುತೂಹಲಗಳ ನಡುವೆ ಮುಗಿದಿದ್ದು, ಸತತವಾಗಿ ಹನ್ನೆರಡು ಗಂಟೆಗಳ ಕಾಲ ನಡೆದ ಮರು ಎಣಿಕೆ ಕಾರ್ಯದಲ್ಲಿ ಅಭ್ಯರ್ಥಿಗಳಿಗೆ ಇದ್ದ ಗೊಂದಲವನ್ನು ಬಹುತೇಕ ನಿವಾರಣೆ ಮಾಡಲಾಗಿದೆ. ಕಳೆದ ಫಲಿತಾಂಶವೇ ಯತಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆಯಿದೆ.

    ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆಯ ಮರು ಮತ ಎಣಿಕೆ ಕೋರಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಹೈಕೋರ್ಟ್ ಮೊರೆ ಹೋಗಿದ್ದರು. ಎರಡೂವರೆ ವರ್ಷಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ಮರು ಎಣಿಕೆಗೆ ಆದೇಶ ಮಾಡಿ ನಂತರ ಹಾಲಿ ಶಾಸಕರನ್ನು ಅಸಿಂಧು ಮಾಡಿತ್ತು. ಅಸಿಂಧು ಅದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಶಾಸಕ ನಂಜೇಗೌಡ ಅವರಿಗೆ ಅಸಿಂಧು ಆದೇಶ ತಡೆಯಾಜ್ಞೆ ನೀಡಿ ಮರು ಎಣೆಕೆಗೆ ಆದೇಶಿಸಿತ್ತು.

    ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾ ಚುನಾವಣಾಧಿಕಾರಿ ನೇತೃತ್ವದಲ್ಲಿ ಮರು ಎಣಿಕೆ ಕಾರ್ಯ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಆರಂಭವಾದ ಮರು ಎಣಿಕೆ ಕಾರ್ಯ ಸತತವಾಗಿ ರಾತ್ರಿ 8 ಗಂಟೆವರೆಗೆ ನಡೆಯಿತು. ಮೊದಲು ಪೋಸ್ಟಲ್ ಬ್ಯಾಲೆಟ್ ಎಣಿಕೆ ಮಾಡಿ ನಂತರ ಇವಿಎಂಗಳ ಎಣಿಕೆ ಕಾರ್ಯ ನಡೆಯಿತು. ಅಭ್ಯರ್ಥಿಗಳ ಸಮ್ಮುಖದಲ್ಲಿ ಅವರ ಎಲ್ಲಾ ಗೊಂದಲ ಅನುಮಾನಗಳನ್ನು ಪರಿಹರಿಸಿದ ನಂತರ ಎಣಿಕೆ ಕಾರ್ಯ ನಡೆಸಲಾಗುತ್ತಿತ್ತು.

    ರಾಜ್ಯ ಚುನಾವಣಾ ಆಯೋಗ ಮತ ಎಣಿಕೆ ಮೇಲೆ ಹದ್ದಿನ ಕಣ್ಣಿಟ್ಟು ಪ್ರತಿ ಸುತ್ತಿನ ಎಣಿಕೆಯ ಮಾಹಿತಿ ಪಡೆಯುತ್ತಿತ್ತು. ರಾಜ್ಯ ಚುನಾವಣಾ ಆಯೋಗದ ಸೂಚನೆ ನಂತರವೇ ಪ್ರತಿ ಸುತ್ತಿನ ಎಣಿಕೆ ಕಾರ್ಯ ಮಾಡಲಾಗಿದೆ. ಹದಿನಾಲ್ಕು ಟೇಬಲ್‌ಗಳಲ್ಲಿ ಒಟ್ಟು 18 ಸುತ್ತಿನ ಮತ ಎಣೆಕೆ ಕಾರ್ಯ ಮಾಡಿ ಮುಗಿಸಲಾಗಿದೆ. ಸದ್ಯ ಎಣಿಕೆಯ ನಂತರ ಪೋಸ್ಟಲ್ ಬ್ಯಾಲೆಟ್‌ನಲ್ಲಿ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರೆ ಫಲಿತಾಂಶದಲ್ಲಿ ಯಾವುದೇ ಬದಲಾವಣೆ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

    ಎಣಿಕೆ ನಂತರ ಪ್ರತಿಕ್ರಿಯೆ ನೀಡಿದ ಶಾಸಕ ನಂಜೇಗೌಡ, ಇಂದಿನ ಎಣಿಕೆ ಕಾರ್ಯ ಸಂತೋಷ ತಂದಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಕ್ಕೆ ನ್ಯಾಯ ಸಿಕ್ಕಿದೆ. ಎರಡೂವರೆ ವರ್ಷಗಳ ಕಾಲ ನನಗಾದ ನೋವಿಗೆ ಪರಿಹಾರ ಸಿಕ್ಕಿದೆ ಎಂದರು.

    ಇನ್ನು ಮರು ಎಣಿಕೆಗಾಗಿ ಎರಡೂವರೆ ವರ್ಷಕಾಲ ನಿರಂತರವಾಗಿ ಕೋರ್ಟ್‌ನಲ್ಲಿ ಹೋರಾಟ ಮಾಡಿದ್ದ ಮಾಲೂರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಇಂದು ಅವರ ಸಾಕಷ್ಟು ಬೆಂಬಲಿಗರು ಹಾಗೂ ವಕೀಲರೊಂದಿಗೆ ಮರು ಎಣಿಕೆ ಕೇಂದ್ರಕ್ಕೆ ಬಂದಿದ್ದರು. ಮರು ಎಣಿಕೆ ನಂತರ ಮಾಜಿ ಶಾಸಕ ಮಂಜುನಾಥಗೌಡ ಪ್ರತಿಕ್ರಿಯೆ ನೀಡಿ, ನನಗೆ ಇನ್ನೂ ಸಮಾಧಾನ ಆಗಿಲ್ಲ, ಇನ್ನೂ ಕೆಲವೊಂದು ಪ್ರಶ್ನೆಗಳಿಗೆ ನನಗೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳ ಪ್ರೊಸೀಜರ್ ಲ್ಯಾಪ್ಸ್ ಇದೆ. ಸಂಪೂರ್ಣ ವಿವಿ ಪ್ಯಾಟ್‌ಗಳನ್ನು ಎಣಿಸಬೇಕಿತ್ತು.

    ಆದರೆ ಕೇವಲ ಐದು ವಿವಿ ಪ್ಯಾಟ್ ಮಾತ್ರ ಎಣಿಕೆ ಮಾಡಿದೆ. ಚುನಾವಣೆ ಮರುಎಣಿಕೆ ವಿರುದ್ಧ ನನ್ನ ಕಾನೂನು ಹೋರಾಟ ಮುಂದುವರೆಯಲಿದೆ. ಸುಪ್ರೀಂ ಕೋರ್ಟ್ ಅರ್ಜಿದಾರರ ಮನವಿಯನ್ನು ಪರಿಗಣಿಸಿ ಎಂದು ಹೇಳಿತ್ತು. ಆದರೆ ಕೆಲವೊಂದು ನನ್ನ ಮನವಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ. ನನ್ನ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

    ಒಟ್ಟಾರೆ ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಿದೆ. ನವೆಂಬರ್ 24ರಂದು ಮರು ಎಣಿಕೆಯ ಫಲಿತಾಂಶ ಹೊರಬೀಳಲಿದೆ.

    • ಟ್ಯಾಗ್ಗಳು
    • concludes
    • confidential
    • Kolar
    • KY Nanjegowda
    • Malur
    • Malur recount
    • Manjunath Gowda
    • report
    • results
    • submitted
    • supreme court
    • Vote Recount
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಫರಿದಾಬಾದ್‌ ಪ್ರಕರಣ;‌ ಶೋಪಿಯಾನ್‌ನಲ್ಲಿ ಮೌಲ್ವಿ ದಂಪತಿ ಅರೆಸ್ಟ್‌
      ಮುಂದಿನ ಲೇಖನಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್, ಕಾರ್ಖಾನೆಗೆ ಬೀಗ ಹಾಕುವ ಎಚ್ಚರಿಕೆ
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ – ಮೆಟ್ರೋ ಬೋಗಿಗಳ ಪರಿಶೀಲನೆ​​​..!

      ರಾಜ್ಯ

      ಸ್ಕೂಟರ್‌ಗೆ ಡಿಕ್ಕಿಯಾಗಿ, ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

      ರಾಜ್ಯ

      ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? – ವಿಶ್ವನಾಥ್ ಅನುಮಾನ

      EDITOR PICKS

      71,000 ಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

      Saval - November 22, 2022

      ತಮಿಳುನಾಡಿನ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

      Saval - August 19, 2022

      ಪಾದಾಚಾರಿಗಳಿಗೆ ಬೈಕ್ ಡಿಕ್ಕಿ: ಇಬ್ಬರು ಯುವಕರ ಸಾವು

      Saval - November 2, 2023

      ಬೈಕ್-ಗೂಡ್ಸ್ ವಾಹನ ಡಿಕ್ಕಿ: ಮೂವರ ಸಾವು

      Saval - August 16, 2022
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Chicken Pepper Special #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies