ಮನೆ ರಾಜ್ಯ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್ – ಕಸ ಬಿಸಾಡಿದ್ರೆ ಬೀಳುತ್ತೆ ಫೈನ್..!

ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್ – ಕಸ ಬಿಸಾಡಿದ್ರೆ ಬೀಳುತ್ತೆ ಫೈನ್..!

0

ಬೆಂಗಳೂರು : ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಮುಗಿಯುತ್ತಿದ್ದಂತೆ ಇದೀಗ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್ ಶುರುವಾಗಿದೆ. ಆಪರೇಷನ್ ಕಸ ನಡೆಸುವ ಮೂಲಕ ಬೆಂಗಳೂರಲ್ಲಿ ಜಿಬಿಎ ಕಸದ ಹಬ್ಬ ಆಚರಿಸಿ, ಕಸ ಬೀಸಾಕದಂತೆ ಜಾಗೃತಿ ಮೂಡಿಸಿತ್ತು. ಇದೀಗ ಐತಿಹಾಸಿಕ ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ಕಸ ಹಾಕೋರಿಗೆ ಫೈನ್ ಹಾಕೋಕೆ ಜಿಬಿಎ ಮುಂದಾಗಿದೆ.

ಬೆಂಗಳೂರಿಗರ ಪಾರಂಪರಿಕ ಹಬ್ಬ, ಐತಿಹಾಸಿಕ ಜಾತ್ರೆ ಬಸವನಗುಡಿಯ ಕಡಲೆಕಾಯಿ ಪರಿಷೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಮುಗಿದಿದ್ದು, ಇದೇ 17ರಿಂದ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ 2025ರ ಸಿದ್ಧತೆ ಆರಂಭವಾಗಲಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಸ್ಥಳೀಯ ಶಾಸಕ, ಜಿಬಿಎ ಅಧಿಕಾರಿಗಳ ನೇತೃತ್ವದಲ್ಲಿ ಪುನರ್ ಪರಿಶೀಲನೆ ಸಭೆ ನಡೆಸಿ, ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಇದರ ಜೊತೆಗೆ ಪರಿಷೆಗೆ ಬರುವ ಜನರು ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ. ಈ ಬಗ್ಗೆ ಜಿಬಿಎ ಸಹ ಜಾಗೃತಿ ಮೂಡಿಸುವ ಪ್ಲಾನ್ ಮಾಡಿದೆ. ಜೊತೆಗೆ ಎಲ್ಲೆಂದರಲ್ಲಿ ಕಸ ಹಾಕಿದ್ರೆ ಎರಡು ಸಾವಿರದವರೆಗೂ ಫೈನ್ ಹಾಕಬಹುದಾಗಿದೆ. ಮಾರ್ಷಲ್‌ಗಳ ನಿಯೋಜನೆಯನ್ನು ಸಹ ಮಾಡಲಾಗಿದೆ.

ಈ ಬಾರಿಯ ಪರಿಷೆ ಪ್ಲಾಸ್ಟಿಕ್ ಮುಕ್ತ ಪರಿಷೆಯಾಗಿದ್ದು, ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್ ಬಳಸುವಂತಿಲ್ಲ. ಒಂದು ವೇಳೆ ಬಳಸಿದ್ರೇ ಎರಡು ಸಾವಿರ ರೂಪಾಯಿವರೆಗೂ ಫೈನ್ ಹಾಕುವ ಎಚ್ಚರಿಕೆಯನ್ನು ಜಿಬಿಎ ಪಶ್ಚಿಮ ಪಾಲಿಕೆ ಆಯುಕ್ತ.ಕೆ.ವಿ ರಾಜೇಂದ್ರ ನೀಡಿದ್ದಾರೆ.