ಬೆಂಗಳೂರು : ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆ ದಾಳಿ ನಡೆಸಿದೆ.
ಎಲ್ಲೆಲ್ಲಿ ದಾಳಿ? : ಬೆಂಗಳೂರು- RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ. ಮಂಡ್ಯ- ನಗರ ಪಾಲಿಕೆ CAO ಪುಟ್ಟಸ್ವಾಮಿ. ಬೀದರ್- ಕೃಷ್ಣಾ ಮೇಲ್ದಂಡೆ ಯೋಜನೆ ಮು.ಇಂಜಿನಿಯರ್ ಪ್ರೇಮ್ ಸಿಂಗ್. ಮೈಸೂರು- ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ರಾಮಸ್ವಾಮಿ ಸಿ.
ಧಾರವಾಡ- ಕರ್ನಾಟಕ ವಿ.ವಿಯ ಸ.ಪ್ರಾಧ್ಯಾಪಕ ಸುಭಾಶ್ ಚಂದ್ರ. ಧಾರವಾಡ- ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್. ಶಿವಮೊಗ್ಗ- SIMS ಮೆಡಿಕಲ್ ಕಾಲೇಜ್ FDA ಲಕ್ಷ್ಮೀಪತಿ ಸಿ.ಎನ್. ದಾವಣಗೆರೆ- APMC ಸ.ನಿರ್ದೇಶಕ ಪ್ರಭು ಜೆ. ಮೈಸೂರು (ಮಡಿಕೇರಿ) PWD, ಸ.ಅ.ಇಂಜಿನಿಯರ್ ಗಿರೀಶ್ ಡಿ.ಎಂ.
ಇಂದು ಬೆಳಗ್ಗೆಯಿಂದ ಅಧಿಕಾರಿಗಳ ಮನೆ, ಕಚೇರಿಗಳ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.















