ಮನೆ ರಾಷ್ಟ್ರೀಯ ಟೈಲರ್‌ ಹತ್ಯೆ: ಉದಯಪುರ ಉದ್ವಿಗ್ನ; ಎನ್ಐಎ ರವಾನಿಸಿದ ಕೇಂದ್ರ

ಟೈಲರ್‌ ಹತ್ಯೆ: ಉದಯಪುರ ಉದ್ವಿಗ್ನ; ಎನ್ಐಎ ರವಾನಿಸಿದ ಕೇಂದ್ರ

0

ಉದಯಪುರ (Udaipur): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದ ಟೈಲರ್‌ ಕನ್ಹಯ್ಯ ಅವರನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರಿಂದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ರಾತ್ರಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ ಐಎ) ತನಿಖಾಧಿಕಾರಿಗಳ ತಂಡವನ್ನು ಉದಯಪುರಕ್ಕೆ ರವಾನಿಸಿದೆ.

ಕಟ್ಟುನಿಟ್ಟಾದ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುವ ಸಾಧ್ಯತೆಯಿದೆ.

ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ಕನ್ಹಯ್ಯ ಅವರ ಶಿರಚ್ಛೇದ ಮಾಡಿ ಹತ್ಯೆ ಮಾಡಿದ್ದಾರೆ. ಈ ಸಂಪೂರ್ಣ ದಾಳಿಯ ವಿಡಿಯೋ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲ, ಘಟನೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೂಲಕ ಆರೋಪಿಗಳು ಕೊಲೆಯ ಹೊಣೆಯನ್ನೂ ಹೊತ್ತುಕೊಂಡಿದ್ದರು.

ಹತ್ಯೆ ಮಾಡಿದ ಇಬ್ಬರನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬನನ್ನು ರಿಯಾಜ್‌ ಎಂದು ಗುರುತಿಸಲಾಗಿದೆ.