ಮನೆ ಅಪರಾಧ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಪಿಎಸ್​ಐ ಸಾವು

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಪಿಎಸ್​ಐ ಸಾವು

0

ಮೈಸೂರು(Mysuru):  ಸಾಲಿಗ್ರಾಮ ಪೊಲೀಸ್​ ಠಾಣೆ ಪಿಎಸ್​​ಐ ದೊಡ್ಡೇಗೌಡ ಅವರು ನಿವೃತ್ತಿಗೆ ಒಂದು ದಿನ ಇರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಸಾಲಿಗ್ರಾಮ ಠಾಣೆಯಲ್ಲಿ ಪಿಎಸ್​ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೊಡ್ಡೇಗೌಡ ಸೋಮವಾರ ರಾತ್ರಿ ಗಸ್ತಿನಲ್ಲಿದ್ದ ವೇಳೆ ಅಸ್ವಸ್ಥಗೊಂಡಿದ್ದರು.

ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.

 ಪಿಎಸ್​ಐ ನಾಳೆ ನಿವೃತ್ತರಾಗಬೇಕಿತ್ತು.