ಮನೆ ಉದ್ಯೋಗ 2000 ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ

2000 ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ

0

ಬೆಂಗಳೂರು(Bengaluru): ರಾಜ್ಯದಲ್ಲಿ ಈ ವರ್ಷವೇ  ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ, ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ

ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಶಾಮಕ ಠಾಣೆ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.

ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ವಿಶೇಷ ಆದ್ಯತೆ, ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದೂ ತಿಳಿಸಿದರು.