ಮನೆ ಸುದ್ದಿ ಜಾಲ ಸರ್ಕಾರಿ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಪೂರೈಕೆ – ಅಕ್ಕಿ, ಗೋಧಿಯಲ್ಲಿ ಹುಳು, ಕಸ ಪತ್ತೆ..!

ಸರ್ಕಾರಿ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಪೂರೈಕೆ – ಅಕ್ಕಿ, ಗೋಧಿಯಲ್ಲಿ ಹುಳು, ಕಸ ಪತ್ತೆ..!

0

ಯಾದಗಿರಿ : ಸರ್ಕಾರಿ ಶಾಲೆ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸಲು.. ಶಾಲಾ ದಾಖಲಾತಿ ಹೆಚ್ಚಿಸಲು ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. ಆದರೆ, ಈಗ ಸರ್ಕಾರ ನೀಡುವ ಬಿಸಿಯೂಟ ಭಾಗ್ಯದಲ್ಲಿ ಬರೀ ಹುಳು ಭಾಗ್ಯವೇ ಹೆಚ್ಚಾಗಿದೆ. ಕೋಟ್ಯಂತರ ರೂಪಾಯಿ ಯೋಜನೆಯು ಸಮರ್ಪಕವಾಗಿ ನಿರ್ವಹಿಸದೇ ನಿರ್ಲಕ್ಷ್ಯ ತೋರಲಾಗಿದೆ.

ಶಾಲೆಗಳಿಗೆ ಕಳಪೆ ಆಹಾರ ಧಾನ್ಯ ನೀಡಲಾಗುತ್ತಿದ್ದು, ಮಕ್ಕಳು ಶಾಲೆಗೆ ಬರೋದಕ್ಕೆ ಹಿಂದೇಟು ಹಾಕುವಂತಾಗಿದೆ. ಸರ್ಕಾರಿ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಧಾನ್ಯ ವಿತರಣೆ ಮಾಡಿ ಉತ್ತಮ ಪೌಷ್ಟಿಕ ಆಹಾರ ನೀಡಬೇಕು. ಆದರೆ, ರಾಜ್ಯ ಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಸರಿಯಾಗಿ ಜಾರಿಗೆ ತಾರದೇ ನಿರ್ಲಕ್ಷ್ಯ ತೋರಿದೆ.

ಯಾದಗಿರಿ ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕಳಪೆ ಆಹಾರ ಧಾನ್ಯ ವಿತರಣೆ ಮಾಡಿದ್ದು ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಹಾಗೂ ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರ ಪ್ರತಿ ತಿಂಗಳು ಬಿಸಿಯೂಟ ಯೋಜನೆಗೆ ಕೋಟ್ಯಂತರ ವೆಚ್ಚ ಮಾಡುತ್ತದೆ. ಆದರೆ, ಶಾಲಾ ಮಕ್ಕಳಿಗೆ ಗುಣಮಟ್ಟದ ಊಟ ನೀಡದೇ ಹುಳು ಇರುವ ಊಟ ವಿತರಣೆ ಮಾಡಲಾಗುತ್ತಿದೆ. ಯಾದಗಿರಿ ನಗರದ ಕೋಳಿವಾಡ ಹಾಗೂ ಬಂದಳ್ಳಿ ಸೇರಿದಂತೆ ಅನೇಕ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಇರುವುದು ಕಂಡು ಬಂದಿದೆ.

ಶಾಲೆಯಲ್ಲಿ ಕೆಲಸ ಮಾಡುವ ಅಡುಗೆ ಸಹಾಯಕರು ಹುಳು ಇರುವ ಆಹಾರ ಧಾನ್ಯ ಸ್ವಚ್ಛತೆ ಮಾಡಿ ನಂತರ ಅಡುಗೆ ಮಾಡುವಂತಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಗುಣಮಟ್ಟದ ಊಟ ಸಿಗುತ್ತವೆ ಎಂಬ ಆಸೆ ಭಾವನೆಯಿಂದ ಮಕ್ಕಳಿಗೆ ಶಾಲೆಗೆ ಕಳುಹಿಸುತ್ತಾರೆ. ಆದರೆ, ಶಿಕ್ಷಕರ ಕೊರತೆಯಿಂದ ಗುಣಮಟ್ಟದ ಶಿಕ್ಷಣ ಮರಿಚಿಕೆಯಾಗಿದೆ. ಅದೆ ರೀತಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯತನದಿಂದ ಗುಣಮಟ್ಟದ ಆಹಾರ ಸಿಗುವುದೂ ಮರಿಚಿಕೆಯಾಗಿದೆ.