ಬೆಳಗಾವಿ : ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ, ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಪರಿಣಾಮ ಸುಮಾರು 9ಕ್ಕೂ ಹೆಚ್ಚು ಜನರ ಕೈಕಾಲು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಬೈಲಹೊಂಗಲ ತಾಲೂಕಿನ ಗರಜೂರ ಗ್ರಾಮದ ರೈತರು, ಮಹಿಳೆಯರು ಸಮಾವೇಶಕ್ಕೆ ತೆರಳುವಾಗ ಈ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಬೆಳಗಾವಿ ಹಾಗೂ ಬೈಲಹೊಂಗಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















