ಮನೆ ರಾಜ್ಯ ಅಪಹಾಸ್ಯ ಮಾಡುವವರಿಗೆ ಹೋರಾಟದ ಮೂಲಕ ಉತ್ತರ ಕೊಡುತ್ತೇನೆ: ಎಚ್‌.ಡಿ.ದೇವೇಗೌಡ

ಅಪಹಾಸ್ಯ ಮಾಡುವವರಿಗೆ ಹೋರಾಟದ ಮೂಲಕ ಉತ್ತರ ಕೊಡುತ್ತೇನೆ: ಎಚ್‌.ಡಿ.ದೇವೇಗೌಡ

0

ಬೆಂಗಳೂರು(Bengaluru): ಕೂರಲು ಏಳಲು ಆಗುವುದಿಲ್ಲ ಎಂದು ಹಾಸ್ಯ ಮಾಡುವರಿಗೆ ನಾನು ಹೋರಾಟದ ಮೂಲಕ ಉತ್ತರ ಕೊಡುತ್ತೇನೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು.

ಜೆಪಿ ಭವನದಲ್ಲಿಂದು ಜನತಾಮಿತ್ರ ಜನ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಪಕ್ಷವನ್ನು ಯಾರು ತುಳಿಯಬೇಕು ಎಂದು ಪ್ರಯತ್ನ ಮಾಡಿದ್ದಾರೋ ಅವರ ವಿರುದ್ಧ ಶತಾಯ ಗತಾಯ ಹೋರಾಟ ಮಾಡುವುದಾಗಿ ಎಂದರು.

ಮೊದಲು ಜಲಧಾರೆ ಕಾರ್ಯಕ್ರಮ ಆಯಿತು. ಈಗ ಜನಮಿತ್ರ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರಿಗೆ ಏನೇನು ಮಾಡಿದ್ದೇನೆ ಎಂಬುದನ್ನು ಹೇಳುವ ಕಾಲ ಬರುತ್ತದೆ. ಈ ದೇವೇಗೌಡ ಹಳ್ಳಿ ರೈತನ ಮಗ. ಕೆಲವರು ಏನು ಮಾಡಲು ಆಗುತ್ತದೆ ಎಂದು ಕುಹಕವಾಡಿದ್ದಾರೆ. ನಮ್ಮ ಪಕ್ಷಕ್ಕೆ ಶಕ್ತಿ ಇಲ್ಲ ಅಂತಾ ಅಪಹಾಸ್ಯ ಮಾಡುತ್ತಾರೆ. ನಮ್ಮ ಶಕ್ತಿ ಏನು ಅನ್ನೋದನ್ನು ಸಾಬೀತುಪಡಿಸುತ್ತೇನೆ ಸವಾಲು ಹಾಕಿದರು.

ಈ ಭಾರಿ ನಮಗೆ ದೈವಿ ಶಕ್ತಿ ಇದೆ. ಪಕ್ಷದ ಪ್ರತಿಯೊಬ್ಬರೂ ಹೋರಾಟದ ಕೆಚ್ಚಿನಿಂದ ಕೆಲಸ ಮಾಡುತ್ತಿದ್ದಾರೆ. ನಮ್ಮ ಹೋರಾದ ಮೇಲೆ ಶಕ್ತಿ ಇದೆ. ಇದನ್ನು ನಾನು ಮಾಡುತ್ತೇನೆ. ಹೋರಾಟಕ್ಕೆ ಸಿದ್ದರಾಗಿ ನಿಲ್ಲಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಇದಕ್ಕೂ ಮುನ್ನ ಜೆಪಿಭವನದಲ್ಲಿ ಜಲಧಾರೆಯ ಮಹಾಕಳಸಕ್ಕೆ ಪೂಜೆ ಹಾಗೂ ಗಂಗಾಪೂಜೆಯನ್ನು ಪುರೋಹಿತರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಶಾಸಕರಾದ ಆರ್. ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ, ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.