ಹಾಸನ : ಇತ್ತೀಚಿಗೆ ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸುರಿದಿದ್ದಾರೆ. ಹಾಸನ ನಗರದ ಉದಯಗಿರಿ ಬಡಾವಣೆಗೆ ಹೋಗುವ ರಸ್ತೆಯ ಕರಿಯಪ್ಪ-ದ್ಯಾವಮ್ಮ ಎಂಬುವವರಿಗೆ ಸೇರಿದ ಮನೆಯವರು ರಸ್ತೆ ಬದಿ ಕಸ ಎಸೆಯುತ್ತಿದ್ದರು.
ಹಲವು ಬಾರಿ ಮಹಾನಗರಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು. ಆದರೂ ರಸ್ತೆ ಬದಿ ಕಸ ಎಸೆಯುತ್ತಿದ್ದರು. ಪೌರಕಾರ್ಮಿಕರು ಒಂದು ಲೋಡ್ ಕಸವನ್ನು ಮನೆಯ ಆವರಣಕ್ಕೆ ಸುರಿದಿದ್ದಾರೆ. ಈ ವೇಳೆ ಮಹಿಳೆ ಮಹಾನಗರಪಾಲಿಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.















