ಮನೆ ಅಪರಾಧ ಕೂದಲು ಉದುರುತ್ತಿದೆ ಎಂದು ನೇಣಿಗೆ ಕೊರಳೊಡ್ಡಿದ ಯುವತಿ

ಕೂದಲು ಉದುರುತ್ತಿದೆ ಎಂದು ನೇಣಿಗೆ ಕೊರಳೊಡ್ಡಿದ ಯುವತಿ

0

ಮೈಸೂರು(Mysuru) : ಪ್ರಸ್ತುತ ದಿನಮಾನಗಳಲ್ಲಿ ಯುವ ಸಮುದಾಯ ಗಂಭೀರವಾಗಿ ಚಿಂತಿಸುವ ಮನೋಸ್ಥೈರ್ಯವನ್ನು ಕಳೆದುಕೊಳ್ಳುತ್ತಿದ್ದು, ಸಣ್ಣ ಪುಟ್ಟ ವಿಚಾರಗಳಿಗೂ ಆತ್ಮಹತ್ಯೆ ದಾರಿಹಿಡಿಯುತ್ತಿದ್ದಾರೆ

ಮೈಸೂರು ನಗರದಲ್ಲಿ ಇಂತಹದ್ದೇ ಘಟನೆ ನಡೆದಿದ್ದು, ತಲೆಕೂದಲು ಹೆಚ್ಚಾಗಿ ಉದುರುತ್ತಿವೆ ಎಂದು ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕಾವ್ಯಶ್ರೀ(22) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿನ ತಮ್ಮ ಮನೆಯಲ್ಲೇ ಕಾವ್ಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಕಳೆದ ಹಲವು ದಿನಗಳಿಂದ ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದ ಕಾವ್ಯಶ್ರೀಗೆ ಕೂದಲು ಉದುರುತ್ತಿತ್ತು. ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆತಿರಲಿಲ್ಲ. ಕೂದಲು ಸಂಪೂರ್ಣವಾಗಿ ಕಳೆದುಕೊಂಡಿದ್ದಳು ಎನ್ನಲಾಗಿದೆ.  ಇದರಿಂದ ಬೇಸತ್ತು ಆಕೆ ಸಾವಿನ ದಾರಿ ಹಿಡಿದಿದ್ದಾಳೆ.