ಬೆಂಗಳೂರು : 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು (ಮಾ.21) ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮೂಲಕ ಉತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ.
ಒಟ್ಟು 11 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮಾ.30ರಂದು ಹಸಿ ಕರಗವಿದ್ದು, ಏ.1ರಂದು ಮಧ್ಯರಾತ್ರಿ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ದಿನವೇ ದ್ರೌಪದಿ ದೇವಿಯ ಹೂವಿನ ಕರಗವು ಸಂಚರಿಸಿ ಲಕ್ಷಾಂತರ ಭಕ್ತರಿಗೆ ದರ್ಶನ ನೀಡಲಿದೆ. ಈ ಬಾರಿಯು ಎ.ಜ್ಞಾನೇಂದ್ರ ಸ್ವಾಮಿ ಕರಗ ಹೊರಲಿದ್ದಾರೆ.
ಸುಮಾರು 10 ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಕರಗ ಶಕ್ತ್ಯೋತ್ಸವ ಕುರಿತು ಇಂದು 11 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ. ಏಪ್ರಿಲ್ 1ರಂದು ನಡೆಯಲಿರುವ ಶಕ್ತ್ಯೋತ್ಸವದಲ್ಲಿ ಎ. ಜ್ಞಾನೇಂದ್ರ ಸ್ವಾಮಿ ಕರಗ ಹೊರಲಿದ್ದಾರೆ. ಕಳೆದ ವರ್ಷ 15ನೇ ಬಾರಿ ಯಶಸ್ವಿಯಾಗಿ ಕರಗ ಹೊತ್ತಿದ್ದ ಜ್ಞಾನೇಂದ್ರ ಸ್ವಾಮಿ, ಈ ಸಲ 16ನೇ ಬಾರಿಗೆ ಕರಗ ಹೊರಲಿದ್ದಾರೆ.















