ಮನೆ ರಾಜ್ಯ ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ದ: ಡಾ.ಯತೀಂದ್ರ ಸಿದ್ದರಾಮಯ್ಯ

ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ದ: ಡಾ.ಯತೀಂದ್ರ ಸಿದ್ದರಾಮಯ್ಯ

0

ಮೈಸೂರು(Mysuru) : ನನ್ನ ತಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಿ ನಾನು ವರುಣಾ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ ಎಂದು ಶಾಸಕ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತನಾಡಿದ ಅವರು,  ಜನ ಹಾಗೂ ಪಕ್ಷ ಅಪೇಕ್ಷಿಸಿದರೆ ಸಿದ್ದರಾಮಯ್ಯ ಅವರು ವರುಣಾದಲ್ಲೆ ಸ್ಪರ್ಧೆ ಮಾಡಲಿ,  ನಾನು ಅವರ ಬೆಂಬಲಕ್ಕೆ ನಿಂತು ಗೆಲುವಿಗೆ ಶ್ರಮಿಸುತ್ತೇನೆ. ನಾನು ಬೇರೆ ಯಾವ ಕ್ಷೇತ್ರದಲ್ಲಿಯೂ  ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ ಸಿದ್ದರಾಮಯ್ಯ ಗೆಲ್ಲಿಸುವ ಕೆಲಸ ಮಾಡುತ್ತೇನೆ . ಅದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ವರುಣಾಗೆ ಬಂದ ತಕ್ಷಣ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗುತ್ತೇನೆ ಎಂಬುದು ಸುಳ್ಳು . ಅಂತಹ ಯಾವ ಚಿಂತನೆಯನ್ನು ಮಾಡಿಲ್ಲ. ಕ್ಷೇತ್ರದ ಆಯ್ಕೆ ವಿಚಾರಕ್ಕೆ ಇನ್ನೂ ಬಹಳಷ್ಟು ಸಮಯ ಇದೆ. ಬಹಳಷ್ಟು ಕ್ಷೇತ್ರಗಳಿಂದ ಸಿದ್ದರಾಮಯ್ಯ ಗೆ ಆಹ್ವಾನ ಇದೆ. ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಅಳೆದು ತೂಗಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಕ್ಷೇತ್ರದ ಆಯ್ಕೆ ಚರ್ಚೆ ತುರ್ತು ಈಗ ಏನು ಇಲ್ಲ ಎಂದು ತಿಳಿಸಿದ್ದಾರೆ.