ಬೆಂಗಳೂರು : ಈಗಾಗಲೇ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟೂರ್ನಿ 2026ಕ್ಕೆ ಚಾಲನೆ ಸಿಕ್ಕಿದೆ. ಆರ್ಸಿಬಿ ಹಾಗೂ ಸನ್ ರೈಸರ್ಸ್ ಉದ್ಘಾಟನಾ ಪಂದ್ಯವಾಡಿದ್ದು, ತವರಿನ ಅಂಗಳದಲ್ಲಿ ಆರ್ಸಿಬಿ ಶುಭಾರಂಭ ಮಾಡಿದೆ.
ಇನ್ನು ಕಾಲ್ತುಳಿತ ದುರಂತ ಸಂಬಂಧ ಪೊಲೀಸರು ಹಾಗೂ ಕೆಎಸ್ಸಿಯಿಂದ ಯಾವುದೇ ಗೊಂದಲಗಳು ಆಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಪ್ರೇಕ್ಷಕರಿಗೆ ಆಗಮನ ಮತ್ತು ನಿರ್ಗಮನದಲ್ಲಿ ಯಾವುದೇ ನೂಕುನುಗ್ಗಲು ಆಗಿಲ್ಲ. ಆದ್ರೆ, ಕಳ್ಳರು ಮಾತ್ರ ತಮ್ಮ ಕೈಚಳ ತೋರಿಸಿದ್ದಾರೆ.
ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯದ ವೇಳೆ ಕ್ರಿಕೆಟ್ ಪ್ರೇಮಿಗಳ ಜೇಬಿಗೆ ಕಳ್ಳರು ಕನ್ನ ಹಾಕಿದ್ದಾರೆ. ಪಂದ್ಯ ನೋಡಲು ಹೋಗಿದ್ದ ಮಹಿಳೆಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದೆ.
ತಮ್ಮ ಪತಿಯ ಮೊಬೈಲ್ ಫೋನ್ ಕೂಡ ಕಳ್ಳತನವಾಗಿರುವುದಾಗಿ ನೋವು ಹೇಳಿಕೊಂಡಿದ್ದಾರೆ. ಕ್ರಿಕೆಟ್ ನೋಡಲು ಬರುವವರು ಹುಷಾರಾಗಿರಿ, ಇಲ್ಲಿ ಸಂಭ್ರಮದ ನಡುವೆಯೇ ಮೊಬೈಲ್ ಕಳ್ಳತನ ಮಾಡುವ ದೊಡ್ಡ ಜಾಲವೇ ಇದೆ ಎಂದು ಮಹಿಳೆ ಐಪಿಎಲ್ ಅಭಿಮಾನಿಗಳಿಗೆ ಹುಷಾರಾಗಿರಲು ಕರೆ ನೀಡಿದ್ದಾರೆ.















