ಮನೆ ರಾಜ್ಯ ಕಾವೇರಿ ನದಿಯಲ್ಲಿ ಮುಳುಗಿ ಇನ್ಫೋಸಿಸ್ ಉದ್ಯೋಗಿ ಸಾವು..!

ಕಾವೇರಿ ನದಿಯಲ್ಲಿ ಮುಳುಗಿ ಇನ್ಫೋಸಿಸ್ ಉದ್ಯೋಗಿ ಸಾವು..!

0

ಮಂಡ್ಯ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ರಾಜಮೂರ್ತಿ ನಗರದ ವಿಘ್ನೇಶ್ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಇನ್ಫೋಸಿಸ್ ಉದ್ಯೋಗಿಯಾಗಿದ್ದ ವಿಘ್ನೇಶ್, ಮೂವರು ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶ್ರೀರಂಗಪಟ್ಟಣದ ಎಡಮುರಿಯಲ್ಲಿನ ಕಾವೇರಿ ನದಿಯಲ್ಲಿ ಈಜಾಡಾತ್ತಿದ್ದರು.

ನದಿಯಲ್ಲಿನ ಆಳವಾದ ಜಾಗವನ್ನು ಅರಿಯದೆ ಅವರು ಮುಳುಗಿದ್ದಾರೆ. ತಕ್ಷಣ ವಿಘ್ನೇಶ್ ಸಹಾಯಕ್ಕೆ ಸ್ನೇಹಿತರನ್ನು ಕರೆದಿದ್ದಾರೆ. ನೀರಿನಲ್ಲಿ ಮುಳುಗಿದ ಅವರನ್ನು ರಕ್ಷಣೆ ಮಾಡಲು ಸ್ನೇಹಿತರಿಗೆ ಸಾಧ್ಯವಾಗಿಲ್ಲ. ಕೆ.ಆರ್.ಸಾಗರ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಬಂದು, ಶವ ಹೊರತೆಗೆದು ಮೈಸೂರು ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.