ಮನೆ ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಗೃಹ ಸಚಿವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಗೃಹ ಸಚಿವರು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರು ರಾಜೀನಾಮೆ ನೀಡುವ  ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಬಂಧನ ಬೆನ್ನಲ್ಲೆ ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು.

ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವರು ಸ್ಟ್ರಾಂಗ್ ಆಗಿದ್ದರಿಂದಲೇ ಅಕ್ರಮ ಪ್ರಕರಣ ಹೊರಬಂತು. ಪ್ರಕರಣ ಹೊರಬಂದ ಕೂಡಲೇ ಸಿಐಡಿ ತನಿಖೆಗೆ ವಹಿಸಿದ್ದೇವೆ. ಗೃಹಸಚಿವರ ದಕ್ಷತೆಯಿಂದಲೇ ತನಿಖೆ ಈ ಹಂತಕ್ಕೆ ಬಂದಿದೆ ಎಂದು ಹೇಳಿದರು.

ಕರಾವಳಿ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕುರಿತು ಪ್ರತಿಕ್ರಿಯಿಸಿ, ನಿನ್ನೆ ರಾತ್ರಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಮಳೆಯಿಂದ ಹಾನಿಯಾದವರಿಗೆ ಪರಿಹಾರ ನೀಡಲು ಸೂಚಿಸಿದ್ದೇನೆ ಎಂದರು.