ಮನೆ ರಾಜ್ಯ ಹಿಂದೆ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರ, ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರ: ಸಿಎಂ ಬೊಮ್ಮಾಯಿ

ಹಿಂದೆ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರ, ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರ: ಸಿಎಂ ಬೊಮ್ಮಾಯಿ

0

ಮೈಸೂರು (Mysuru): ಹಿಂದೆ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರ ಇತ್ತು. ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದ ಸಿಎಂ ಹೇಗೆ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತದೆ. ದಕ್ಷ ಆಡಳಿತಗಾರ ಎನ್ನುವ ಸಿದ್ದರಾಮಯ್ಯನವ್ರು ಹಿಂದೆ‌ ಡಿಜಿಪಿಯೊಬ್ಬರ ಕೇಸನ್ನು ಮುಚ್ಚಿ ಹಾಕಿಲ್ವ ಎಂದು ಪ್ರಶ್ನಿಸಿದರು.

18 ಕೋಟಿ ಅವ್ಯವಹಾರ ನಡೆಸಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿತ್ತು. ಆದರೂ ಆ ಅಧಿಕಾರಿಯನ್ನು ಬಂಧಿಸಿದ್ರಾ? ಆದರೆ ನಮ್ಮ ಸರ್ಕಾರ ಭ್ರಷ್ಟಾಚಾರ ಕಂಡು ಬಂದ ಕೂಡಲೇ ಎಡಿಜಿಪಿಯನ್ನು ಬಂಧಿಸಿದ್ದೇವೆ. ಹಿಂದೆ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರ ಇತ್ತು. ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರ ಇದೆ ಎಂದು ಹೇಳಿದರು.