ಮನೆ ಅಪರಾಧ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪತಿ

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪತಿ

0

ಶ್ರೀರಂಗಪಟ್ಟಣ(Shreerangapattana): ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಕ್ಕಳ ಮುಂದೆಯೇ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಗೆಂಡೆಹೊಸಹಳ್ಳಿಯಲ್ಲಿ ನಡೆದಿದೆ.

ಯೋಗಿತಾ (27) ಗಂಡನಿಂದಲೇ ಕೊಲೆಯಾದ ಮಹಿಳೆ. ರವಿ ಎಂಬಾತ ಆಕೆಯ ಪತಿ ಹಾಗೂ ಆರೋಪಿಯಾಗಿದ್ದಾನೆ.

ಪತಿ ರವಿ ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದು ಪತ್ನಿಗೆ ತಿಳಿದಿದ್ದು, ಈ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಅಲ್ಲದೇ ಪತ್ನಿಗೆ ಮನೆ ಬಿಟ್ಟು ಹೋಗುವಂತೆ ಪದೇ ಪದೇ ರವಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಪತಿ-ಪತ್ನಿ ನಡುವಿನ ಜಗಳ ಸರಿಪಡಿಸಲು ಸಾಕಷ್ಟು ಬಾರಿ ಗ್ರಾಮದ ಮುಖಂಡರು ನ್ಯಾಯ ಪಂಚಾಯಿತಿ ನಡೆಸಿದ್ದರಾದರೂ ಇವರಿಬ್ಬರ ಜಗಳ ನಿಂತಿರಲಿಲ್ಲ. ಕೊಲೆಯಾದ ಹಿಂದಿನ ದಿನ ಆರೋಪಿ ರವಿ ಮಕ್ಕಳಿಗೆ ಪಾನಿಪುರಿ ತಿನ್ನಿಸುತ್ತಿದ್ದ ವೇಳೆ  ಮತ್ತೇ ಜಗಳ ಆರಂಭವಾಗಿದ್ದು, ಇಬ್ಬರ ವಾಗ್ವಾದ ತಾರಕಕ್ಕೇರಿದಾಗ ಪತ್ನಿ ಯೋಗಿತಾಗೆ ಮನಬಂದಂತೆ ಥಳಿಸಿದ ರವಿ, ಬಳಿಕ ಪತ್ನಿಯನ್ನು ಕೋಣೆಯೊಳಗೆ ಎಳೆದೊಯ್ದಿದ್ದಾನೆ.

ಇದನ್ನು ಗಮನಿಸಿ ಹೆದರಿದ ಮಕ್ಕಳು ಅಕ್ಕಪಕ್ಕದ ಮನೆಯವರಿಗೆ ವಿಚಾರ ತಿಳಿಸಿದ್ದು, ನೆರೆಮನೆಯವರು ಬರುವಷ್ಟರಲ್ಲಿ ರವಿ ಪತ್ನಿಯನ್ನು ಕೊಲೆಮಾಡಿದ್ದಾನೆ. ಈ ವಿಚಾರವನ್ನು ಯಾರಿಗೂ ಹೇಳದಂತೆ ಮಕ್ಕಳಿಗೆ ತಿಳಿಸಿ ಆರೋಪಿ ರವಿ ಪರಾರಿಯಾಗಿದ್ದಾನೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರವಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.