ಮನೆ ಅಪರಾಧ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು

0

ಕಲಬುರಗಿ(Kalburgi): ಜೇವರ್ಗಿ-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿರುವ ಕಟ್ಟಿಸಂಗಾವಿ ಬ್ರಿಡ್ಜ್ ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಜೇವರ್ಗಿ ತಾಲೂಕಿನ ಹಿಪ್ಪರಗಾ ಗ್ರಾಮದ ನಿವಾಸಿಗಳಾದ ಆಕಾಶ್ ಬಡಿಗೇರ್ (೨೧), ಶಿವು ಮ್ಯಾಗೇರಿ (೨೧) ಮತ್ತು ಲಕ್ಷ್ಮಣ ಮಲಬಾಡಿ (೧೮) ಮೃತ ದುರ್ದೈವಿಗಳು.
ಸ್ಥಳಕ್ಕೆ ಕಲಬುರಗಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಶುಕ್ರವಾರ ಸಂಜೆ ಚಿತ್ತಾಪುರ ತಾಲೂಕಿನ ನಾಗಾವಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ಬೈಕ್ ಮೇಲೆ ಜೇವರ್ಗಿ ಕಡೆಗೆ ಹೊರಟಿದ್ದ ವೇಳೆ ಮಾರ್ಗ ಮಧ್ಯ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಜರುಗಿಸಲಾಗಿದೆ.