ಮನೆ ರಾಜ್ಯ ಕೆಆರ್‌ಎಸ್ ಜಲಾಶಯದಿಂದ ನದಿಗೆ ೧೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕೆಆರ್‌ಎಸ್ ಜಲಾಶಯದಿಂದ ನದಿಗೆ ೧೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ

0

ಮಂಡ್ಯ(Mandya): ಕೆಆರ್‌ಎಸ್ ಜಲಾಶಯಲ್ಲೆ ಒಳ ಹರಿವು ಹೆಚ್ಚಾ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನದಿಂದ ೧೦ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಿರುವುದಾಗಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ೩೫ ಸಾವಿರ ಕ್ಯುಸೆಕ್ ದಾಟಿದೆ. ಶನಿವಾರ ಮಧ್ಯಾಹ್ನ ಜಲಾಶಯದ ನೀರಿನ ಮಟ್ಟ೧೨೨ ಅಡಿಗೆ ತಲುಪಿದೆ. ಭರ್ತಿಗೆ ೨.೮೦ ಅಡಿ ಬಾಕಿ ಉಳಿದಿದೆ. ಜೊತೆಗೆ ಹೇಮಾವತಿ ಜಲಾಶಯದಿಂದಲೂ ನೀರು ಬರುತ್ತಿರುವ ಕಾರಣ ನೀರು ಬಿಡುಗಡೆ ಮಾಡಲಾಗಿದೆ.
ನದಿ ತೀರದಲ್ಲಿ ವಾಸಿಸುವ ಜನರ ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ನಿಗಮದ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಸಂಜೆ ಮತ್ತಷ್ಟು ನೀರು ಹರಿಸುವ ಸಾಧ್ಯತೆ ಇದ್ದು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.