ಮನೆ ಮನರಂಜನೆ ಜು.12 ರಂದು ಸೆಟ್ಟೇರಲಿದೆ ನಟ ಶಿವರಾಜ್‌ ಕುಮಾರ್‌ ಹೊಸ ಚಿತ್ರ

ಜು.12 ರಂದು ಸೆಟ್ಟೇರಲಿದೆ ನಟ ಶಿವರಾಜ್‌ ಕುಮಾರ್‌ ಹೊಸ ಚಿತ್ರ

0

ಬೆಂಗಳೂರು (Bengaluru): ನಟ ಶಿವರಾಜ್‌ ಕುಮಾರ್ ಅಭಿನಯದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದೆ. ಜುಲೈ 12ರಂದು ಚಿತ್ರದ ಹೆಸರು ಘೋಷಣೆ ಆಗಲಿದೆ.

ಎಆರ್‌ಕೆ ಪ್ರೊಡಕ್ಷನ್ ಮತ್ತು ರುಬಿನ್ ರಾಜ್ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ. ಇದುವರೆಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಕೊಟ್ರೇಶ್‌ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಶಿವರಾಜ್‌ಕುಮಾರ್‌ ಅವರ ‘ವಜ್ರಕಾಯ’, ‘ಬಂಗಾರ ಸನ್‌ ಆಫ್‌ ಬಂಗಾರ’ ಚಿತ್ರಗಳಿಗೆ ಕೊಟ್ರೇಶ್‌ ಸಹ ನಿರ್ದೇಶಕರಾಗಿದ್ದರು.

ಶಿವರಾಜ್‌ಕುಮಾರ್‌ ಅವರಂಥ ಅದ್ಭುತ ನಟನ ಚಿತ್ರ ನಿರ್ದೇಶಿಸುತ್ತಿರುವುದು ನಿಜಕ್ಕೂ ನನ್ನ ಅದೃಷ್ಟ. ನನಗೆ ನಿರ್ದೇಶನ ಮಾಡಲು ಅವಕಾಶ ನೀಡಿರುವ ಶಿವಣ್ಣ ಹಾಗೂ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ಚಿತ್ರ ಉತ್ತಮವಾಗಿ ಬರಲು ಶ್ರಮವಹಿಸುತ್ತೇನೆ. ಈಗ ಚಿತ್ರೀಕರಣ ನಡೆಸುವ ಸ್ಥಳಗಳ ಆಯ್ಕೆ ನಡೆಯುತ್ತಿದೆ. ಸದ್ಯದಲ್ಲೇ ಶೂಟಿಂಗ್‌ ಆರಂಭವಾಗಲಿದೆ ಎಂದು ನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.

ನಾನು ಈ ಸಿನಿಮಾದಲ್ಲಿ ಅಭಿನಯಿಸಲು ಉತ್ಸುಕನಾಗಿದ್ದೇನೆ. ನಾನು ನಟಿಸಿರುವ ಮೂರು ಚಿತ್ರಗಳಲ್ಲಿ ಕೊಟ್ರೇಶ್ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದಾರೆ ಕೊಟ್ರೇಶ್ ಅವರಿಗೆ ಶುಭವಾಗಲಿ ಎಂದು ಶಿವಣ್ಣ ಹಾರೈಸಿದ್ದಾರೆ.

ಜನಪ್ರಿಯ ಸಂಭಾಷಣೆಕಾರ ಮಾಸ್ತಿ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಮಾಸ್ತಿ, ಕೊಟ್ರೇಶ್ ಹಾಗೂ ಅಭಿ ಚಿತ್ರಕಥೆ ಬರೆದಿರುವ ಈ ನೂತನ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಲಿದ್ದಾರೆ. ಸೋಹಿತ್ ನೀಲಮ್ ಛಾಯಾಗ್ರಹಣ ಹಾಗೂ ದೀಪು ಎಸ್ .ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿರಲಿದೆ.