ಮನೆ ರಾಜಕೀಯ ಮೂಲ ಕಾಂಗ್ರೆಸ್ಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ: ಬಿಜೆಪಿ ವ್ಯಂಗ್ಯ

ಮೂಲ ಕಾಂಗ್ರೆಸ್ಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ: ಬಿಜೆಪಿ ವ್ಯಂಗ್ಯ

0

ಬೆಂಗಳೂರು(Bengaluru): ಕಾಂಗ್ರೆಸ್ಸಿನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಅವರ ಚಾಕರಿ ಮಾಡುವ ಸುಯೋಗ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಸಿದ್ದರಾಮೋತ್ಸವದ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ಸ್ಥಾನದ ಕನಸು‌ ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಎಂದು ವ್ಯಂಗ್ಯವಾಡಿದೆ.

ಸಿದ್ದರಾಮೋತ್ಸವದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಜೋರಾಗಿಯೇ ಬೀಸುತ್ತಿದೆ. ಕಾಂಗ್ರೆಸ್ಸಿನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸ್ಸಿಗರು ಮೂಕಪ್ರೇಕ್ಷಕರಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿರುವ ನಾಯಕರು ಯಾರು ಎಂಬುದನ್ನು ಖುದ್ದು ಬಿ.ಕೆ.ಹರಿಪ್ರಸಾದ್ ಬಯಲು‌ ಮಾಡಿದ್ದಾರೆ‌. ಇದು ಸಿದ್ದರಾಮಯ್ಯ ಅವರಿಗೆ ನೀಡಲಾದ ಎಚ್ಚರಿಕೆ ಗಂಟೆಯೋ ಅಥವಾ ಸಿದ್ದರಾಮಯ್ಯಗೆ ಪ್ರತಿಸ್ಪರ್ಧಿಗಳ ಸೃಷ್ಠಿಯೋ? ಎಂದು ಪ್ರಶ್ನಿಸಿದೆ.