ಮನೆ ರಾಜ್ಯ ಕೆಆರ್ ಎಸ್ ಗೆ ಬಾಗೀನ ಅರ್ಪಿಸಲು ರಾಜವಂಶಸ್ಥರನ್ನು ಆಹ್ವಾನಿಸಿ: ಮನವಿ

ಕೆಆರ್ ಎಸ್ ಗೆ ಬಾಗೀನ ಅರ್ಪಿಸಲು ರಾಜವಂಶಸ್ಥರನ್ನು ಆಹ್ವಾನಿಸಿ: ಮನವಿ

0

ಮೈಸೂರು(Mysuru): ಕೆಆರ್ ಎಸ್ ನ ಜಲಾನಯನ ಪ್ರದೇಶಗಳಲ್ಲಿ  ನಿರಂತರ ಮಳೆಯಾಗುತ್ತಿದ್ದು, ಜಲಾಶಯ ಭರ್ತಿಯಾಗುವತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ  ಕಾರ್ಯಕ್ರಮಕ್ಕೆ ರಾಜವಂಶಸ್ಥರನ್ನು ಆಹ್ವಾನಿಸುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ.

ಮಂಡ್ಯ ಜಿಲ್ಲಾಧಿಕಾರಿ ಡಾ.ಎಸ್.ಅಶ್ವಥಿ ಅವರಲ್ಲಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಲೋಕೇಶ್ ವಿ.ಪಿಯಾ ಮನವಿ ಮಾಡಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಾಗೀನ ಅರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಕೋರಿದ್ದಾರೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯ ಭರದಿಂದ ತುಂಬುತ್ತಿದೆ. ಸದ್ಯದಲ್ಲೇ ಬಾಗೀನ ಅರ್ಪಣೆ ಸಮಾರಂಭ ಆಯೋಜಿಸಲು ಜಿಲ್ಲಾಡಳಿತ ಸಿದ್ದತೆ ನಡೆಸುತ್ತಿದ್ದು, ಈ ಬಾಗೀನ ಅರ್ಪಣೆ ವೇಳೆ ರಾಜ್ಯ ಸರಕಾರದ ಗಣ್ಯರ ಜತೆಗೆ ಮೈಸೂರು ರಾಜವಂಶದವರನ್ನು ಆಹ್ವಾನಿಸಬೇಕು ಎಂದು ಮನವಿ ಮಾಡಿದ್ದಾರೆ.