ಮನೆ ರಾಜ್ಯ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

0

ಹುಬ್ಬಳ್ಳಿ (Hubballi): ವಾಸ್ತುತಜ್ಞ ಚಂದ್ರಶೇಖರ ಗುರೂಜಿ‌ ಹತ್ಯೆ ಪ್ರಕರಣದ ಆರೋಪಿಗಳನ್ನು ಮಂಗಳವಾರ ಮತ್ತೆ 6 ದಿನಗಳ ಕಾಲ‌ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ವಿದ್ಯಾನಗರ ಠಾಣೆ ಪೊಲೀಸರು ನಗರದ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಆರೋಪಿಗಳಾದ ಮಹಾಂತೇಶ ಶಿರೂರ ಮತ್ತು ಮಂಜುನಾಥ ಮರೇವಾಡನನ್ನು ಅವರನ್ನು ಹಾಜರುಪಡಿಸಿದರು.

ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಹದಿನೈದು ದಿನ ಪೊಲೀಸ್ ವಶಕ್ಕೆ ನೀಡಬೇಕು ಎಂದು ಪ್ರಕರಣದ ತನಿಖಾಧಿಕಾರಿ ಎಸಿಪಿ ವಿನೋದ ಮುಕ್ತೇದಾರ ಮತ್ತು ವಿದ್ಯಾನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವಿಶ್ವನಾಥ ಚೌಗಲೆ ನೇತೃತ್ವದ ತಂಡ ಕೋರಿತು.

ಪೊಲೀಸರ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ಕಸ್ಟಡಿಯಲ್ಲಿ ಪೊಲೀಸರು ನಿಮಗೆ ತೊಂದರೆ ಕೊಟ್ಟಿದ್ದಾರೆಯೇ ಎಂದು‌ ಆರೋಪಿಗಳನ್ನು ಕೇಳಿದರು‌. ಅದಕ್ಕೆ ಆರೋಪಿಗಳು ಇಲ್ಲ ಎಂದು‌ ಪ್ರತಿಕ್ರಿಯಿಸಿದರು. ನಂತರ ಹದಿನೈದು ದಿನಗಳ ಬದಲಿಗೆ ಜುಲೈ 18ರವರೆಗೆ ಏಳು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶ ನೀಡಿದರು.