ಮನೆ ಸುದ್ದಿ ಜಾಲ ನೈರ್ಮಲ್ಯ ಕಾಪಾಡಿಕೊಳ್ಳುವುದಕ್ಕೆ ಮಾಹಿತಿ ಶಿಕ್ಷಣ ಸಂವಹನದ ಜಾಗೃತಿ ಮೂಡಿಸಿ: ಡಾ.ಬಗಾದಿ ಗೌತಮ್

ನೈರ್ಮಲ್ಯ ಕಾಪಾಡಿಕೊಳ್ಳುವುದಕ್ಕೆ ಮಾಹಿತಿ ಶಿಕ್ಷಣ ಸಂವಹನದ ಜಾಗೃತಿ ಮೂಡಿಸಿ: ಡಾ.ಬಗಾದಿ ಗೌತಮ್

0

ಮೈಸೂರು (Mysuru): ನೈರ್ಮಲ್ಯ ಕಾಪಾಡಿಕೊಳ್ಳುವುದಕ್ಕೆ ಜನರಲ್ಲಿ ಮಾಹಿತಿ ಶಿಕ್ಷಣ ಸಂವಹನ ಜಾಗೃತಿಯನ್ನು ಮೂಡಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಬೀದಿ ಬದಿ ವ್ಯಾಪಾರ ವಹಿವಾಟುದಾರರಿಗೆ ಸ್ವಚ್ಛತೆ ಬಗ್ಗೆ ಆರೋಗ್ಯ ಶಿಕ್ಷಣವನ್ನು ನೀಡಿ ಎಂದು ತಿಳಿಸಿದರು.

ಜನರಿಗೆ ಕಡಿಮೆ ಸಕ್ಕರೆ ಅಂಶ ಇರುವ ಪದಾರ್ಥಗಳನ್ನು ಸೇವನೆ ಮಾಡುವುದಕ್ಕೆ ಜಾಗೃತಿಯನ್ನು ಮೂಡಿಸಿ ಎಂದು ಹೇಳಿದರು. ಕಾರ್ಬೊನೇಟೆಡ್ ಡ್ರಿಂಕ್ಸ್ ಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.