ಮನೆ ಅಂತಾರಾಷ್ಟ್ರೀಯ ಶ್ರೀಲಂಕಾ ಸರ್ಕಾರದ ಅಧೀಕೃತ ಕಟ್ಟಡ ತೆರವು ಮಾಡಿದ ಪ್ರತಿಭಟನಾಕಾರರು

ಶ್ರೀಲಂಕಾ ಸರ್ಕಾರದ ಅಧೀಕೃತ ಕಟ್ಟಡ ತೆರವು ಮಾಡಿದ ಪ್ರತಿಭಟನಾಕಾರರು

0

ಕೊಲಂಬೊ(Colombo): ಶ್ರೀಲಂಕಾದ ಪ್ರತಿಭಟನಾಕಾರರು ಸರ್ಕಾರದ ಅಧಿಕೃತ ಕಟ್ಟಡಗಳನ್ನು ಶಾಂತಿಯುತವಾಗಿ ತೆರವು ಮಾಡುವ ನಿರ್ಧಾರ ಕೈಗೊಂಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಕಾಪಾಡುವಲ್ಲಿ ವಿಫಲವಾದ ಅಧ್ಯಕ್ಷ ಮತ್ತು ಪ್ರಧಾನ ಮಂತ್ರಿಯನ್ನು ಕೆಳಗಿಳಿಸಲು ತಮ್ಮ ಪ್ರಯತ್ನವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಅಧ್ಯಕ್ಷ ಗೊಟಬಯ ರಾಜಪಕ್ಸ ಮನೆಗೆ ನುಗ್ಗಿದ್ದ ಪ್ರತಿಭಟನಾಕಾರರು ಅವರು ದೇಶ ಬಿಟ್ಟು ತೆರಳುವಂತೆ ಮಾಡಿದ್ದರು. ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಕಚೇರಿಗೂ ದಾಳಿ ಮಾಡಿದ್ದರು.

ಬುಧವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದ ಅಧ್ಯಕ್ಷ ಗೊಟಬಯ, ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಪ್ರಭಾರಿ ಅಧ್ಯಕ್ಷರಾಗಿ ನೇಮಕ ಮಾಡಿ ದೇಶ ತೊರೆದಿದ್ದಾರೆ.

ಸರ್ಕಾರಿ ಕಟ್ಟಡಗಳನ್ನು ತೆರವು ಮಾಡುವಂತೆ ಆಗ್ರಹಿಸಿರುವ ಗೊಟಬಯ ರಾಜಪಕ್ಸ, ಪ್ರತಿಭಟನಾಕಾರರನ್ನು ತೆರವುಗೊಳಿಸಲು ಬೇಕಾದ ಕಾನೂನು ಕ್ರಮ ಜರುಗಿಸುವಂತೆ ಭದ್ರತಾ ಪಡೆಗೆ ಆದೇಶಿಸಿದ್ದಾರೆ.

ನಾವು ಈ ಕೂಡಲೇ ಅಧ್ಯಕ್ಷರ ಅರಮನೆ, ಅಧ್ಯಕ್ಷರ ಕಚೇರಿಗಳು ಮತ್ತು ಪ್ರಧಾನ ಮಂತ್ರಿ ಕಚೇರಿಯನ್ನು ತೆರವುಗೊಳಿಸುತ್ತಿದ್ದೇವೆ. ನಮ್ಮ ಹೋರಾಟ ಮಾತ್ರ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರ ವಕ್ತಾರರು ತಿಳಿಸಿದ್ದಾರೆ ಎಂದು ವರದಿ ಮಾಡಿದೆ.

200 ವರ್ಷಗಳಷ್ಟು ಹಳೆಯದಾದ ಶ್ರೀಲಂಕಾ ಅಧ್ಯಕ್ಷರ ಅರಮನೆಯನ್ನು ಕೂಡಲೇ ಬಿಟ್ಟುಕೊಡಬೇಕು, ಮೌಲ್ಯಯುತ ಕಲೆ ಮತ್ತು ಕಲಾಕೃತಿಗಳನ್ನು ರಕ್ಷಿಸಬೇಕೆಂದು ಈ ಹಿಂದೆ ಪ್ರತಿಭಟನೆಗೆ ಬೆಂಬಲ ನೀಡಿದ್ದ ಹಿರಿಯ ಬೌದ್ಧ ಸನ್ಯಾಸಿಯೊಬ್ಬರು ಸೂಚಿಸಿದ್ದಾರೆ ಎಂದು ವರದಿಯಾಗಿದೆ.