ಮನೆ ರಾಜ್ಯ ಫೋಟೋಶೂಟ್ ಗಾಗಿ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಬಿ.ಕೆ.ಹರಿಪ್ರಸಾದ್

ಫೋಟೋಶೂಟ್ ಗಾಗಿ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಬಿ.ಕೆ.ಹರಿಪ್ರಸಾದ್

0

ನವದೆಹಲಿ(New Delhi): ಕೇವಲ ಫೋಟೋಶೂಟ್ ಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಳೆಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿ.ಕೆ ಹರಿಪ್ರಸಾದ್, ಮರವಂತೆ ಕಡಲತೀರದಲ್ಲಿ ಸಿಎಂ ಪೋಟೋಶೂಟ್ ನಡೆಸಿದ್ದಾರೆ. ರಾತ್ರಿ ಹೋಗಿ ಪ್ರವಾಹ ಪರಿಸ್ಥಿತಿ ಅಧ್ಯಯನ ಮಾಡಲಾಗುತ್ತಾ? ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯಾದ್ಯಂತ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ರಾಜ್ಯ ತತ್ತರಿಸಿದ್ದು  ಉಡುಪಿ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಪಾರ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ  ಸಿಎಂ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.