ಮನೆ ಅಪರಾಧ ವಂಚನೆ ಪ್ರಕರಣ: ನಿರ್ಮಾಪಕ ವಿರೇಂದ್ರ ಬಾಬು ಬಂಧನ

ವಂಚನೆ ಪ್ರಕರಣ: ನಿರ್ಮಾಪಕ ವಿರೇಂದ್ರ ಬಾಬು ಬಂಧನ

0

ಬೆಂಗಳೂರು(Bengaluru): ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ನಿರ್ಮಾಪಕ ವಿರೇಂದ್ರ ಬಾಬು ಅವರನ್ನು ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ಬಸವರಾಜ ಘೋಷಾಲ್ ಎಂಬುವರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ವಿರೇಂದ್ರ ಬಾಬು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.