ಮನೆ ಅಪರಾಧ ಆನೇಕಲ್: ಕತ್ತು ಸೀಳಿ ಯುವಕನ ಕೊಲೆ

ಆನೇಕಲ್: ಕತ್ತು ಸೀಳಿ ಯುವಕನ ಕೊಲೆ

0

ಆನೇಕಲ್(Anekal): ಕೆಲಸ ಮುಗಿಸಿ ರೂಮಿಗೆ ತೆರಳುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಆತನ ಕತ್ತು ಸೀಳಿ, ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ.

ಸೋನು ಥಾಮ್ಸನ್ ಕೊಲೆಯಾದ ವ್ಯಕ್ತಿ. ಮೂಲತಃ ಕೇರಳದವರಾದ ಸೋನು,

ಜಿಗಣಿ ಕೈಗಾರಿಕಾ ಪ್ರದೇಶದ ಟಾಟಾ ಅಡ್ವಾನ್ಸ್ ಕಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿ ಹೊರ ಬರುತ್ತಿದ್ದಂತೆ ಅಡ್ಡಗಟ್ಟಿದ ಮೂರು ಮಂದಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದಾಗ ಚಾಕುವಿನಿಂದ ಕುತ್ತಿಗೆ ಸೀಳಿ ಕಿರಾತಕರು ಪರಾರಿಯಾಗಿದ್ದಾರೆ.

ಪೊಲೀಸರ ವಿರುದ್ಧ ಆಕ್ರೋಶ: ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಪೊಲೀಸರು ಸೂಕ್ತ ರೀತಿಯಲ್ಲಿ ಗಸ್ತು ಸೇರಿದಂತೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರಾದ ಸುರೇಶ್  ಜಿಗಣಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದರಲ್ಲೂ ಉತ್ತರ ಭಾರತದ ಕಾರ್ಮಿಕರು ಜೀವ ಕೈಯಲ್ಲಿ ಹಿಡಿದು ಮನೆ ತಲುಪಬೇಕಾದ ಸ್ಥಿತಿ ಇದೆ. ಪದೇ ಪದೇ ಕಾರ್ಮಿರನ್ನು ಹೆದರಿಸಿ ಮೊಬೈಲ್ ಸೇರಿದಂತೆ ಹಣವನ್ನು ದೋಚುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಕಳ್ಳರ ಮೇಲೆ ಕಣ್ಣಿಟ್ಟು ಕಳ್ಳರ ಹಾವಳಿ ನಿಯಂತ್ರಿಸಬೇಕು ಎಂದು ಕಾರ್ಮಿಕರಾದ ನಾಗೇಶ್ ಪೊಲೀಸರನ್ನು ಒತ್ತಾಯಿಸಿದ್ದಾರೆ .

ಘಟನೆ ಬಗ್ಗೆ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.