ಮನೆ ರಾಷ್ಟ್ರೀಯ ಸೇತುವೆಯಿಂದ ನರ್ಮದಾ ನದಿಗೆ ಬಿದ್ದ ಬಸ್; 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ

ಸೇತುವೆಯಿಂದ ನರ್ಮದಾ ನದಿಗೆ ಬಿದ್ದ ಬಸ್; 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ

0

ಮಧ್ಯಪ್ರದೇಶ(Madyapradesh): ಇಂದೋರ್ ನಿಂದ ಪುಣೆಗೆ ಹೋಗುತ್ತಿದ್ದ ಬಸ್ ಧಾರ್ ಜಿಲ್ಲೆಯ ಖಲ್ಘಾಟ್ ಎಂಬಲ್ಲಿ ಸೇತುವೆಯಿಂದ ನರ್ಮದಾ ನದಿಗೆ ಬಿದ್ದಿದೆ.

ಸುಮಾರು 50 ರಿಂದ 60 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು. ಈಗಾಗಲೇ 12 ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಕುರಿತು ಟ್ವೀಟ್​ ಮಾಡಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಾಣ್‌ ದುರಂತದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಧಾರ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಇದುವರೆಗೆ 15 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದಿದ್ದಾರೆ.