ಮನೆ ಆರೋಗ್ಯ ಸಿರಿಧಾನ್ಯ ಸೇವನೆಯಿಂದ ಗುಣವಾಗದ ಕಾಯಿಲೆಗಳನ್ನು ಗುಣ ಪಡಿಸಬಹುದು!

ಸಿರಿಧಾನ್ಯ ಸೇವನೆಯಿಂದ ಗುಣವಾಗದ ಕಾಯಿಲೆಗಳನ್ನು ಗುಣ ಪಡಿಸಬಹುದು!

0

ಇಂದಿನ ದಿನಗಳಲ್ಲಿ ಸಿರಿಧಾನ್ಯಗಳಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ಹೆಚ್ಚನವರಿಗೆ ಗೊತ್ತಾಗಿ ಬಿಟ್ಟಿದೆ. ಯಾಕೆಂದರೆ ಇದರಲ್ಲಿ ರುವ ಹಲವು ಬಗೆಯ ಆರೋಗ್ಯಕಾರಿ ಅಂಶಗಳು, ರೋಗ – ರುಜಿನಗಳನ್ನು ದೂರವಿಡುವುದು ಮಾತ್ರವಲ್ಲದೆ, ದೀರ್ಘಕಾಲದ ಕಾಯಿಲೆಗಳಿಂದ ಕೂಡ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ.
ಸರಿಸುಮಾರು 20- 25 ವರ್ಷಗಳ ಹಿಂದೆ, ನಮ್ಮ ಹಳ್ಳಿಗಳಲ್ಲಿ ವಾರಕ್ಕೆ ಒಮ್ಮೆ ನಡೆಯುವ ತರಕಾರಿ ಹಾಗೂ ದಿನಸಿ ಸಾಮಾಗ್ರಿಗಳನ್ನು ಮಾರಾಟ ಮಾಡುವ ಸಂತೆಗಳಿಗೆ, ನಮ್ಮ ಹಿರಿಯರ ಜೊತೆಗೆ ಹೋದಾಗ ಅಲ್ಲ ಅಲ್ಲಿ ವಿಭಿನ್ನ ಬಗೆಯ ಸಿರಿ ಧಾನ್ಯಗಳು ರಾಶಿ-ರಾಶಿಯೇ ಕಾಣಲು ಸಿಗುತ್ತಿತ್ತು. ಇದರ ಮಾರಾಟ ಕೂಡ ಅಷ್ಟೇ ಜೋರಾಗಿ ನಡೆಯುತ್ತಿತ್ತು. ಆದರೆ ಕಾಲ ಬದಲಾಗಿ ಬಿಟ್ಟಿದೆ, ಹಿಂದಿನ ಕಾಲದಲ್ಲಿ ಹೇರಳವಾಗಿ ಎಲ್ಲಾ ಕಡೆ ಲಭ್ಯವಿದ್ದ ಈ ಆರೋಗ್ಯ ಭರಿತ ಸಿರಿಧಾನ್ಯಗಳು, ಇತ್ತೀಚಿನ ದಿನಗಳಲ್ಲಿ ಕಣ್ಮರೆ ಆಗಿರುವುದು ನಿಜಕ್ಕೂ ಬೇಜಾರಿನ ಸಂಗತಿ.
ಈಗಿನ ಪರಿಸ್ಥಿತಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವರ್ಷಕ್ಕೊಮ್ಮೆ ನಮ್ಮ ಸರ್ಕಾರದ ವತಿಯಿಂದ ನಡೆಯುವ ಸಿರಿ ಧಾನ್ಯಗಳ ಜಾತ್ರೆ ಎಂಬ ವಿಶೇಷ ಸಂದರ್ಭದಲ್ಲಿ ಮಾತ್ರ ಇಂತಹ ಧಾನ್ಯಗಳು ಕಾಣಲು ಸಿಗುತ್ತವೆ. ಅದು ಬಿಟ್ಟರೆ, ಅಂದಿನ ಕಾಲದಲ್ಲಿ ನಮಗೆ ಸುಲಭವಾಗಿ ಸಿಗುತ್ತಿದ್ದ, ಸಿರಿ ಧಾನ್ಯಗಳಾದ ಸಾಮೆ, ಸಜ್ಜೆ, ನವಣೆ ಇವೆಲ್ಲಾವೂ ಕೂಡ ಯಾವ ಅಂಗಡಿಗಳಲ್ಲಿ ಹುಡುಕಿದರೂ ಕೂಡ ನಮ್ಮ ಕಣ್ಣಿಗೆ ಕಾಣುತ್ತಿಲ್ಲ. ಕೆಲವೊಂದು ಹಳೆಯ ದಿನಸಿ ಅಂಗಡಿಯಲ್ಲಿ ಕಂಡು ಬರಬಹುದು ಬಿಟ್ಟರೆ, ತುಂಬಾನೇ ವಿರಳ ಅಂತಲೇ ಹೇಳಬಹುದು. ಹೀಗಾಗಿ ಇತ್ತೀಚಿನ ಪೀಳಿಗೆಗೆ ಈ ಆರೋಗ್ಯ ಭರಿತ ಸಿರಿಧಾನ್ಯಗಳ ಅರಿವು ಕೂಡ ಕಡಿಮೆ ಆಗುತ್ತಾ ಹೋಗುತ್ತಿದೆ. ಅದು ಏನೇ ಇರಲಿ, ಬನ್ನಿ ಇಂದಿನ ಲೇಖನದಲ್ಲಿ ಈ ಸಿರಿಧಾನ್ಯಗಳ ಆರೋಗ್ಯಕಾರಿ ಪ್ರಯೋಜನಗಳು ಏನು ಎನ್ನುವುದನ್ನು ನೋಡೋಣ ಬನ್ನಿ…
ಪೌಷ್ಟಿಕಾಂಶಗಳ ಭಂಡಾರ!
ಸಿರಿ ಧಾನ್ಯಗಳಲ್ಲಿ ಪೌಷ್ಟಿಕಾಂಶಗಳ ಭಂಡಾರವೇ ಅಡಗಿದೆ. ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಈ ಧಾನ್ಯಗಳಲ್ಲಿ ಕಂಡು ಬರುತ್ತದೆ. ಮುಖ್ಯವಾಗಿ ತಾಮ್ರ, ಖನಿಕಾಂಶ, ಪ್ರೋಟೀನ್, ವಿಟಮಿನ್ಸ್ ಮೆಗ್ನೀಷಿಯಂ, ಪಾಸ್ಪರಸ್, ಮ್ಯಾಂಗನೀಸ್, ನಾರಿನಾಂಶ ಹಾಗೂ ಇತರ ಪೌಷ್ಟಿಕ ಸತ್ವಗಳು ಸಾಕಷ್ಟು ಪ್ರಮಾಣದಲ್ಲಿ ಇದರಲ್ಲಿ ಕಂಡು ಬರುತ್ತದೆ.
ದೇಹದ ತೂಕ ಇಳಿಸಲು
ಇಂದಿನ ದಿನಗಳಲ್ಲಿ ಹೆಚ್ಚಿನವರಿಗೆ ದೇಹದ ತೂಕ ಇಳಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಯಾಕೆಂದ್ರೆ ಸರಾಸರಿ ದೇಹದ ತೂಕ ದಿನಾ ಹೋದಂತೆ ಹೆಚ್ಚಾಗುತ್ತಾ ಹೋದಂತೆ, ದೇಹದಲ್ಲಿ ಬೊಜ್ಜು ಕೂಡ ಆವರಿಸಿಕೊಂಡು, ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬಿಡುತ್ತದೆ. ಹೀಗಾಗಿ ಸರಿಯಾದ ವ್ಯಾಯಾಮ ಮತ್ತು ಕ್ಯಾಲೋರಿ ಅಂಶ ಕಡಿಮೆ ಇರುವ ಆಹಾರ ಕ್ರಮವನ್ನು ಅನುಸರಿಸು ವುದು ಮುಖ್ಯವಾಗಿರುತ್ತದೆ.
ಈ ನಿಟ್ಟಿನಲ್ಲಿ ನೋಡುವುದಾದರೆ, ಕಡಿಮೆ ಕ್ಯಾಲೋರಿಗಳನ್ನು ಒಳಗೊಂಡಿರುವ ಸಿರಿ ಧಾನ್ಯಗಳನ್ನು ದಿನಿತ್ಯದ ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ, ದೇಹದ ತೂಕ, ಕ್ರಮೇಣವಾಗಿ ನಿಯಂತ್ರಣಕ್ಕೆ ಬರಲು ನೆರವಾಗುತ್ತದೆ. ಹೀಗಾಗಿ ಸಿರಿಧಾನ್ಯಗಳಿಂದ ಮಾಡಿದ ಪಾನೀಯವನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ,ದೇಹದ ತೂಕ ನಿಯಂತ್ರಣಕ್ಕೆ ಬರುವುದು ಮಾತ್ರವಲ್ಲದೆ, ದೇಹ ಸದೃಢತೆ ಯಿಂದ ಕೂಡಿರುತ್ತದೆ.
ದೀರ್ಘಕಾಲದ ಕಾಯಿಲೆಗಳ ನಿಯಂತ್ರಣಕ್ಕೆ…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿ ಹಾಗು ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ದೀರ್ಘ ಕಾಲದ ಕಾಯಿಲೆಗಳಾದ, ಹೃಯದ ಸಮಸ್ಯೆಗಳು, ಪಾರ್ಶ್ವವಾಯು, ರಕ್ತದ ಒತ್ತಡ, ಮಧುಮೇಹದಂತಹ ಕಾಯಿಲೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ.
ಹೀಗಾಗಿ ಇಂತಹ ಕಾಯಿಲೆಗಳನ್ನು ನಿಯಂತ್ರಣ ದಲ್ಲಿ ಇಟ್ಟುಕೊಳ್ಳಬೇಕೆಂದರೆ, ಪೌಷ್ಟಿಕಾಂಶ ಹೆಚ್ಚಾ ಗಿರುವ ಸಿರಿ ಧಾನ್ಯಗಳನ್ನು ತಮ್ಮ ಆಹಾರ ಪದ್ಧತಿ ಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ರೋಗ – ನಿರೋಧಕ ಶಕ್ತಿ
ಸಣ್ಣ ಮಕ್ಕಳಿಂದ ಹಿಡಿದು, ವಯಸ್ಸಾದವರವರೆಗೂ, ಆರೋಗ್ಯ ಚೆನ್ನಾಗಿ ಇರಬೇಕೆಂದರೆ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಬಲವಾಗಿರಬೇಕು. ದುರ್ಬಲ ರೋಗ ನಿರೋಧಕ ಶಕ್ತಿ ಇದ್ದವರಿಗೆ ಸಣ್ಣ ಪುಟ್ಟ ಕಾಯಿಲೆಗಳು ಸಹ ಹೆಚ್ಚಾಗಿ ಆಸ್ಪತ್ರೆ ಸೇರುವಂತೆ ಮಾಡುತ್ತದೆ.
ಇದಕ್ಕಾಗಿ ಆರೋಗ್ಯಕಾರಿ ಆಹಾರ ಪದಾರ್ಥ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ತಕ್ಕ ಮಟ್ಟಿಗೆ ಆದರೂ ಕೂಡ ನೈಸರ್ಗಿಕ ವಾಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚು ಮಾಡಿಕೊಳ್ಳಬಹುದು. ಇದಕ್ಕೊಂದು ಒಳ್ಳೆಯ ಉದಾಹರಣೆ ಏನೆಂದರೆ, ಸಿರಿ ಧಾನ್ಯಗಳನ್ನು ತಮ್ಮ ದೈನಂದಿನ ಆಹಾರ ಪದಾರ್ಥಗಳಲ್ಲಿ ಸೇರಿಸಿಕೊಳ್ಳುವ ಅಭ್ಯಾಸ ಮಾಡಿ ಕೊಂಡರೆ ಬಹಳ ಒಳ್ಳೆಯದು.
ಸಕ್ಕರೆಕಾಯಿಲೆ ಇರುವವರಿಗೆ
ಸಕ್ಕರೆಕಾಯಿಲೆ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಕೂಡ ಸಾಮಾನ್ಯ ಕಾಯಿಲೆ ಆಗಿ ಬಿಟ್ಟಿದೆ. ನಾವು ಈ ಹಿಂದೆಯೂ ಹೇಳಿದಂತೆ, ಒಮ್ಮೆ ಈ ಕಾಯಿಲೆ ಕಾಣಿಸಿಕೊಂಡರೆ, ಮತ್ತೆ ಅದನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸಾಧ್ಯವಿಲ್ಲ, ಆದರೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಇದಕ್ಕಾಗಿ ಕಟ್ಟುನಿಟ್ಟಿನ ಆಹಾರಪದ್ಧತಿ, ಸರಿಯಾದ ಜೀವನಶೈಲಿ ಹಾಗೂ ವೈದ್ಯರ ಸಲಹೆಗಳನ್ನು ಅನುಸರಿಸುವ ಜೊತೆಗೆ ಸಿರಿ ಧಾನ್ಯಗಳನ್ನು ಕೂಡ ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು. ಯಾಕೆಂದರೆ ಇದರಲ್ಲಿ ಕಂಡು ಬರುವ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವು ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ನೋಡಿಕೊಂಡು, ಸಕ್ಕರೆಕಾಯಿಲೆಯನ್ನು ಕಂಟ್ರೋಲ್ ಮಾಡುತ್ತದೆ.
ಇನ್ನು ಒಂದು ವೇಳೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ, ಮಿತಿಮೀರಿ ಹೋಗಿದ್ದರೆ, ತಾವು ತೆಗೆದು ಕೊಳ್ಳುತ್ತಿರುವ ಔಷಧಿಗಳ ಜೊತೆಗೆ ಸಿರಿ ಧಾನ್ಯಗಳನ್ನು ಸೇವನೆ ಮಾಡುತ್ತಾ ಬಂದರೆ ಕ್ರಮೇಣವಾಗಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ನೆರವಾಗುತ್ತದೆ.