ಮನೆ ಅಪರಾಧ ಹಂದಿ ಅಣ್ಣಿ ಹತ್ಯೆ ಪ್ರಕರಣ: ಎಸ್ಪಿ ಮುಂದೆ ಶರಣಾದ ಆರೋಪಿಗಳು

ಹಂದಿ ಅಣ್ಣಿ ಹತ್ಯೆ ಪ್ರಕರಣ: ಎಸ್ಪಿ ಮುಂದೆ ಶರಣಾದ ಆರೋಪಿಗಳು

0

ಶಿವಮೊಗ್ಗ/ಚಿಕ್ಕಮಗಳೂರು: ಹಂದಿ ಅಣ್ಣಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದು, ಹಂದಿ ಅಣ್ಣಿಯನ್ನು ನಾವೇ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ.

ಜುಲೈ 14ರಂದು ಶಿವಮೊಗ್ಗದ ವಿನೋಬನಗರದ ಪೊಲೀಸ್ ಠಾಣೆಯ ಮುಂಭಾಗದ ವೃತ್ತದಲ್ಲಿ ಹೊನ್ನಪ್ಪ ಅಲಿಯಾಸ್ ಹಂದಿ ಅಣ್ಣಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದಾದ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದರು.

ಪೊಲೀಸರ ಕೈಗೆ ಸಿಗದ ಆರೋಪಿಗಳು ಅಂತಿಮವಾಗಿ ಎನ್‌ಕೌಂಟರ್ ಭಯದಿಂದ ಎಸ್ಪಿ‌ ಅಕ್ಷಯ್​ ಕಚೇರಿಗೆ ಬಂದು ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಗಳನ್ನು ಚಿಕ್ಕಮಗಳೂರು ಕೋರ್ಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು ನಂತರ ಶಿವಮೊಗ್ಗ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ.