ಮನೆ ರಾಜಕೀಯ ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಕಲಹೋತ್ಸವ ಮಾಡಬಹುದು: ಕಾಂಗ್ರೆಸ್

ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಕಲಹೋತ್ಸವ ಮಾಡಬಹುದು: ಕಾಂಗ್ರೆಸ್

0

ಬೆಂಗಳೂರು(Bengaluru): ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಮಾಡುವುದಾದರೆ ‘ಕಲಹೋತ್ಸವ’ ಮಾಡಬಹುದು. ಆ ಮಟ್ಟಿಗಿದೆ ಬಿಜೆಪಿಯ ಕಲಹ! ಎಂದು ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಬಿಜೆಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಸಚಿವ ಸಂಪುಟದಲ್ಲಿ ಹಿರಿಯ ಸಚಿವರು ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳಬಾರದು. ಅವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದ್ದರು. ಇದನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ರೇಣುಕಾಚಾರ್ಯ, ನಮ್ಮ ಸರ್ಕಾರದ ಸಚಿವರು ವಿಧಾನಸೌಧದ ಮೂರನೇ ಮಹಡಿಗೆ ಮಾತ್ರ ಸೀಮಿತವಾಗಬಾರದು. ಇದರಿಂದ ಪಕ್ಷಕ್ಕೆ ಮುಜುಗರವಾಗುತ್ತದೆ. ಇನ್ನಾದರೂ ಅವರು ವಿಧಾನಸೌಧ ಬಿಟ್ಟು ಹೊರಬಂದು ಜನರ ಕೆಲಸ ಮಾಡಬೇಕು ಎಂದು ಚಾಟಿ ಬೀಸಿದ್ದರು.

ಮಂತ್ರಿಗಳು ಕೆಲಸ ಮಾಡುತ್ತಿಲ್ಲ ಎಂದು ಸ್ವತಃ ಬಿಜೆಪಿಯ ರೇಣುಕಾಚಾರ್ಯ ಅವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಮಂತ್ರಿಗಳ ಮೇಲೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹಿಡಿತವಿಲ್ಲದಿರುವುದೇ ಈ ನಿಷ್ಕ್ರೀಯತೆಗೆ ಕಾರಣವಲ್ಲವೇ ಎಂದು ಮತ್ತೊಂದು ಪ್ರಶ್ನೆ ಎಸೆದಿದೆ. ಈ ಟ್ವೀಟ್‌ನಲ್ಲಿ #ಬೊಂಬೆಬೊಮ್ಮಾಯಿ ಟ್ಯಾಗ್‌ ಬಳಸಿ ಕುಟುಕಿದೆ..

#BJPvsBJP ಟ್ಯಾಗ್‌ ಬಳಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಸಚಿವರು ಕೆಲಸವನ್ನೇ ಮಾಡುತ್ತಿಲ್ಲ. ವ್ಯಾಪಾರಸೌಧದ 3ನೇ ಮಹಡಿಗೆ ಸೀಮಿತರಾಗಿದ್ದಾರೆ. ತಮ್ಮ ಕ್ಷೇತ್ರ ಬಿಟ್ಟು ಮಂತ್ರಿಗಿರಿಯ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಸಚಿವರು ರಾಜೀನಾಮೆ ಕೊಡಬೇಕು ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಅವರ ಮಾತುಗಳನ್ನು ಒಪ್ಪುವಿರಾ ಅಥವಾ ಅವರ ವಿರುದ್ಧ ಕ್ರಮ ಕೈಗೊಳ್ಳುವಿರಾ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.