ಮನೆ ರಾಜ್ಯ ಹೆಚ್.ವಿ.ರಾಜೀವ್‌ ಸೇರಿದಂತೆ 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮ ನಿರ್ದೇಶನ ರದ್ದು

ಹೆಚ್.ವಿ.ರಾಜೀವ್‌ ಸೇರಿದಂತೆ 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮ ನಿರ್ದೇಶನ ರದ್ದು

0

ಬೆಂಗಳೂರು (Bengaluru): ರಾಜ್ಯ ಸರ್ಕಾರ 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರುಗಳ ನಾಮ ನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹೆಚ್.ವಿ.ರಾಜೀವ್‌, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಲಲಾಟಮೂರ್ತಿ, ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರದ ಪಿ.ಬಿ.ಶಾಂತಮೂರ್ತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಕೆ.ಎಸ್.ರಮೇಶ್‌ ಹೊಳ್ಳ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಶಿವಕುಮಾರ್‌ ಸಂಗೂರ, ಕೆಜಿಎಫ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಶ್ವಿನಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ನಾಗೇಶ್‌ ಪುಂಡಲೀಕ ಸಾ ಕಲಬುರ್ಗಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ರವಿಶಂಕರ ಮಿಜಾರ್‌, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಿ.ಆನಂದ, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಬಸವಲಿಂಗಪ್ಪ ಕಾಶಿನಾಥ್‌ ನಾವಲಗಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ದಯಾಘನ್‌ ಪ್ರಹ್ಲಾದ್‌ ರಾವ್‌ ಧಾರವಾಡಕರ್‌ ಅವರ ಅಧ್ಯಕ್ಷ ಸ್ಥಾನವನ್ನು ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಆದೇಶ ಹೊರಡಿಸಿದ್ದಾರೆ.