ಮನೆ Uncategorized ರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ವೀರೇಂದ್ರ ಹೆಗ್ಗಡೆ

ರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ವೀರೇಂದ್ರ ಹೆಗ್ಗಡೆ

0

ನವದೆಹಲಿ(Newdelhi): ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಮಾಜಸೇವೆಗೆ ಜೀವನವನ್ನು ಮುಡಿಪಾಗಿಟ್ಟಿರುವ ಹೆಗ್ಗಡೆಯವರು ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗದ ಉತ್ತೇಜನಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದ್ದಾರೆ. ಸ್ವಯಂ ಉದ್ಯೋಗವಕಾಶಗಳ ಬಗ್ಗೆ ಅರಿವು ಮೂಡಿಸಲು ಮತ್ತು ಗ್ರಾಮೀಣ ಯುವಕರಿಗೆ ತರಬೇತಿ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ.

ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೂವಾರಿಗಳಾಗಿದ್ದಾರೆ. ಸ್ವಸಹಾಯ ಸಂಘ ಚಳುವಳಿ, ಆರ್ಥಿಕ ಸೇರ್ಪಡೆ, ಸರ್ವರಿಗೂ ಆದಾಯ, ಕೃಷಿಯಲ್ಲಿ ಸಶಕ್ತೀಕರಣ, ಮಹಿಳೆಯರ ಸಬಲೀಕರಣಕ್ಕಾಗಿ ‘ಜ್ಞಾನವಿಕಾಸ’. ಸರಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವುದು, ಪ್ರತಿತಿಂಗಳು 13 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಮಾಸಾಶನ ನೆರವು, ವಿಶೇಷಚೇತನರಿಗೆ ನೆರವು, ಸ್ವಚ್ಛ ಭಾರತ ಅಭಿಯಾನ ಹೀಗೆ ಹತ್ತು ಹಲವಾರು ಸಮಾಜೋಪಯೋಗಿ ಕಾರ್ಯಕ್ರಮಗಳಲ್ಲಿ ಹೆಗ್ಗಡೆಯವರು ತೊಡಗಿಸಿಕೊಂಡಿದ್ದಾರೆ.73 ವರ್ಷ ವಯಸ್ಸಿನ ಹೆಗ್ಗಡೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಯಾಗಿದ್ದಾರೆ.