ಮನೆ ರಾಜ್ಯ ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದ ಟೆಂಪೋ: ಓರ್ವನ ಸಾವು, ಮೂವರಿಗೆ ಗಾಯ

ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದ ಟೆಂಪೋ: ಓರ್ವನ ಸಾವು, ಮೂವರಿಗೆ ಗಾಯ

0

ಕೊಪ್ಪಳ (Koppala): ಮಲಗಿದ್ದವರ ಮೇಲೆ ವ್ಯಕ್ತಿಯೊಬ್ಬ ಟೆಂಪೋ ಹರಿಸಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತಿಪ್ಪಣ್ಣ ದುರಗಪ್ಪ (75) ಮೃತಪಟ್ಟವರು. ಕುಕನೂರಿನ ಹನುಮವ್ವ ಉಪ್ಪಾರ (57), ಸಿರಗುಪ್ಪ ತಾಲ್ಲೂಕಿನ ರುದ್ರಪಾಲ ಗ್ರಾಮದ ಮಲ್ಲಮ್ಮ ಬಿಳೆಕಲ್ಲಪ್ಪ (32), ಕಾರಟಗಿಯ ತಾಲ್ಲೂಕಿನ ನಂದಿಹಳ್ಳಿ ತುಕರಾಮ ಮಾಕಪ್ಪ (65) ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಹುಲಗಿಯ ನಂದಿ ಸರ್ಕಲ್‌ ರಸ್ತೆಯ ಮುದ್ದಮ್ಮ ದೇವಸ್ಥಾನದ ಹಿಂಭಾಗದ ಸಂಕೀರ್ಣದ ಬಳಿ ಘಟನೆ ನಡೆದಿದ್ದು, ಸಂಕೀರ್ಣದಲ್ಲಿರುವ ಬಳೆ ಅಂಗಡಿಯ ಮುಂದೆ ಮಲಗಿದ್ದವರ ಮೇಲೆ ವ್ಯಕ್ತಿಯೊಬ್ಬ ಟೆಂಪೋ ಹರಿಸಿದ್ದಾನೆ.

ಬಳ್ಳಾರಿ ತಾಲ್ಲೂಕಿನ ಯರಂಗಳಿಯ ಚಾಲಕ ಶ್ರೀನಿವಾಸ ಮದ್ಯ ಸೇವಿಸಿ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದಾನೆ ಎಂದು ರಸ್ತೆ ಬದಿ ಮಲಗಿದ್ದ ರುದ್ರಪಾಲ ಗ್ರಾಮದ ಎಂಬುವರು ಮುನಿರಾಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಎಫ್‌ಐಆರ್‌ ದಾಖಲಾಗಿದೆ.