ಮನೆ ಕಾನೂನು ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ವಿಚಾರಣೆ ಮುಂದೂಡಿದ `ಸುಪ್ರೀಂ’

ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ವಿಚಾರಣೆ ಮುಂದೂಡಿದ `ಸುಪ್ರೀಂ’

0

ನವದೆಹಲಿ(New Delhi): ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಎರಡು ವಾರಗಳ ಕಾಲ ಮುಂದೂಡಿದೆ.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವು ಯೋಜನೆಯ ಡಿಪಿಆರ್ ಬಗ್ಗೆ ಅಭಿಪ್ರಾಯ ನೀಡಬಾರದು ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಕಳೆದ ವಾರ ವಿಚಾರಣೆ ನಡೆಸಿದ್ದ ಕೋರ್ಟ್ ಪ್ರಾಧಿಕಾರಕ್ಕೆ ನೋಟಿಸ್ ನೀಡಿತ್ತು.ಮಂಗಳವಾರದ ವಿಚಾರಣೆ ವೇಳೆ ಪ್ರಾಧಿಕಾರದ ವಕೀಲರು, ತಮಿಳುನಾಡು ಸರ್ಕಾರದ ತಕರಾರಿಗೆ ಉತ್ತರ ನೀಡಲು ಕಾಲಾವಕಾಶ ಕೇಳಿದರು.

ಬಳಿಕ‌ ನ್ಯಾಯಪೀಠವು ವಿಚಾರಣೆಯನ್ನು ಆಗಸ್ಟ್ 10ಕ್ಕೆ  ಮುಂದೂಡಿತು.