ಮನೆ ರಾಜ್ಯ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಸರಿಯಲ್ಲ: ಪ್ರಮೋದಾ ದೇವಿ ಒಡೆಯರ್

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಸರಿಯಲ್ಲ: ಪ್ರಮೋದಾ ದೇವಿ ಒಡೆಯರ್

0

ಮೈಸೂರು(Mysuru) : ಕೆಆರ್ ಎಸ್ ಜಲಾಶಯದ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ಕೊಡಬಾರದು. ಅಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಕೂಡ ಸರಿಯಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅಭಿಪ್ರಾಯಿಸಿದರು.

ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1950 ರ ಕಾಲದಿಂದ ಆ ಬೆಟ್ಟದ 1,650 ಎಕರೆ ನಮ್ಮದು ಭಾರತ ಸರ್ಕಾರದ ಜೊತೆ ಮೈಸೂರು ಸಂಸ್ಥಾನ ಮಾಡಿಕೊಂಡ ಆಸ್ತಿ ಹಂಚಿಕೆಯ ಪತ್ರದಲ್ಲಿ ಬೇಬಿ ಬೆಟ್ಟ ಇದೆ. ಇದು ಖಾಸಗಿ ಆಸ್ತಿ. ಇದರಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

ಟ್ರಯಲ್ ಬ್ಲಾಸ್ಟ್ ಗೆ ತಜ್ಞರು ಸರ್ಕಾರಿ ಜಾಗ ಗುರುತಿಸಿ ಕೊಳ್ಳಬೇಕು. ಬೇಬಿ ಬೆಟ್ಟದ ಜಾಗವನ್ನು ಉದ್ದೇಶ ಪೂರ್ವಕವಾಗಿ ಬಿ ಖರಬ್ ಪಟ್ಟಿಗೆ ಸೇರಿಸಲಾಗಿತ್ತು. ಹೀಗಾಗಿ ನಾನು ಆ ಜಾಗದ ವಿಚಾರದಲ್ಲಿ ನಾನು ಕೋರ್ಟ್ ಗೆ ಹೋಗಿರಲಿಲ್ಲ ಎಂದು ಹೇಳಿದ್ದಾರೆ

ಬೇಬಿ ಬೆಟ್ಟದ ವಿಚಾರದಲ್ಲಿ ನಾನು ಪ್ರತಿಭಟನೆ ಸ್ಥಳಕ್ಕೆ ಹೋಗುವುದಿಲ್ಲ. ಕಾನೂನು ತಜ್ಞರ ಜೊತೆ ಚರ್ಚಿಸಿ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದು ತಿಳಿಸಿದರು.

ಸರ್ಕಾರದಿಂದ ಕಿರುಕುಳ: ಮೈಸೂರಿನ ಕುರುಬರಹಳ್ಳಿ ಬಿ ಖರಾಬ್ ಜಾಗದ ವಿವಾದದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಅರಮನೆಗೆ ಜಯವಾಗಿದೆ. ಆ ತೀರ್ಪು ಈ ಬೆಟ್ಟದ ಜಾಗಕ್ಕೂ ಅನ್ವಯ. ಆ ಜಾಗ ನಮ್ಮ ವ್ಯಾಪ್ತಿಗೆ ಬಂದರೆ ನಾನು ಅಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲ್ಲ. ಸರ್ಕಾರಗಳು ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾವೇನೂ ಯಾರೋದು ಆಸ್ತಿ ಕಬಳಿಸಲು ಹೊರಟ್ಟಿದ್ದೇವೇ ಎಂಬ ರೀತಿ ಸರ್ಕಾರಗಳು ಯೋಚಿಸುತ್ತಿವೆ ಇದು ನಮಗೆ ಸರ್ಕಾರಗಳು ಕೊಡುತ್ತಿರುವ ಕಿರುಕುಳ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಬೇರೆ ಯಾವ ರಾಜಮನೆತನಗಳಿಗೂ ಆಸ್ತಿಯ ವಿಚಾರದಲ್ಲಿ ಅಲ್ಲಿನ ಸರ್ಕಾರಗಳು ಇಷ್ಟು ತೊಂದರೆ ಕೊಟ್ಟಿಲ್ಲ 10 ರೂಪಾಯಿ ಬೆಲೆ ಬಾಳುವುದನ್ನು 10 ಪೈಸೆಗೆ ತೆಗೆದು ಕೊಳ್ಳುವ ಮನಃಸ್ಥಿತಿ ಸರ್ಕಾರ ಪ್ರದರ್ಶಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು,  ಸರಕಾರಕ್ಕೆ ನಾನು ಧನ್ಯವಾದ ಹೇಳ್ತಿದ್ದಿ‌ನಿ. ಇವರಿಂದ ನನ್ನ ಕಾನೂನು ಜ್ಞಾನ ಹೆಚ್ಚಾಯಿತು ಎಂದು ಹೇಳಿದರು.