ಮನೆ ರಾಜ್ಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

0

ಮೈಸೂರು(Mysuru): ನಗರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಬುಧವಾರ ರಾತ್ರಿ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಅರಣ್ಯ ಇಲಾಖೆಯು ಮೂರು ದಿನಗಳ ಹಿಂದಷ್ಟೇ ಬೋನನ್ನು ಇರಿಸಿದ್ದು,  ಗುರುವಾರ ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸುಮಾರು 6 ವರ್ಷದ ಗಂಡು ಚಿರತೆಯಾಗಿದ್ದು, ಬೆಮೆಲ್ ಆವರಣದ ಕುರುಚಲು ಕಾಡಿನಲ್ಲಿ ಅಡಗಿತ್ತು. ಇದೀಗ ಮೇಲಾಧಿಕಾರಿಗಳ ಅನುಮತಿ ಪಡೆದು ಬಿಳಿಗಿರಿರಂಗನಬೆಟ್ಟದ ಕೆ.ಗುಡಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಎಸಿಎಫ್ ಲಕ್ಷ್ಮಿಕಾಂತ್ ತಿಳಿಸಿದರು.