ಮನೆ ರಾಜ್ಯ ವಿಪತ್ತು ನಿರ್ವಹಣೆ ಕುರಿತು ಅಣಕು ಪ್ರದರ್ಶನ: ಯಶಸ್ವಿ ಕಾರ್ಯಾಚರಣೆ

ವಿಪತ್ತು ನಿರ್ವಹಣೆ ಕುರಿತು ಅಣಕು ಪ್ರದರ್ಶನ: ಯಶಸ್ವಿ ಕಾರ್ಯಾಚರಣೆ

0

ಮೈಸೂರು(Mysuru): ಮೈಸೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಾರ್ಖಾನೆಗಳು, ಬಾಯ್ಲರ್ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಸಹಯೋಗದೊಂದಿಗೆ ವಿಪತ್ತು ನಿರ್ವಹಣೆ ಬಗ್ಗೆ ಅಣಕು ಪ್ರದರ್ಶನವು ಇಂದು ಕೆ. ಆರ್. ನಗರ ತಾಲ್ಲೂಕಿನ ಕುಂಬಾರಕೊಪ್ಪಲಿನಲ್ಲಿ ನಡೆಯಿತು.

ಅಪರ ಜಿಲ್ಲಾಧಿಕಾರಿ ಮಂಜುನಾಧ್ ಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಅಣುಕು ಪುದರ್ಶನ ನಡೆದ ಅಣಕು ಪ್ರದರ್ಶನದಲ್ಲಿ ಅಗ್ನಿ ಶಾಮಕ, ಆರೋಗ್ಯ, ಪೊಲೀಸ್, ಕಂದಾಯ, ಸೇರಿದಂತೆ ಸಂಬಂಧಿಸಿದ ಇತರೆ ಇಲಾಖೆಗಳ ಅಧಿಕಾರಿಗಳು ಅಣುಕು ಪ್ರದರ್ಶನದಲ್ಲಿ ಭಾಗವಹಿಸಿದ್ದರು.
ಅಣಕು ಪ್ರದರ್ಶನದಲ್ಲಿ ರಾಸಾಯಿನಿಕ ಸೋರಿಕೆ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕ್ರಮಗಳು, ಕೈಗೊಳ್ಳಬೇಕಾದ ಮುಂಜಾಗೃತೆಗಳ ಸಿದ್ದತೆಗಳ ಬಗ್ಗೆ ಕಾರ್ಯಾಚರಣೆಯಲ್ಲಿ ಬೆಳಕು ಚೆಲ್ಲಲಾಯಿತು.

ದುರಂತದಿಂದ ಮನುಷ್ಯನಿಗೆ ಸಂಭವಿಸುವ ಸಾವು ನೋವು ಮತ್ತು ನಷ್ಟಗಳನ್ನು ಕನಿಷ್ಟಗೊಳಿಸುವ ಹಾಗೂ ಪರಿಣಾಮಕಾರಿಯಾಗಿ ತುರ್ತು ನಿಭಾಯಿಸುವ ಕುರಿತು ಕೆಲಸಗಾರರನ್ನು ಸಿದ್ಧಗೊಳಿಸುವುದು. ಆಡಳಿತ ವರ್ಗದವರಿಗೆ ವಿಪತ್ತುಗಳ ನಿವಾರಣೆಯಲ್ಲಿ ಪಾತ್ರಗಳು, ಕೆಲಸಗಾರರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಪ್ರದರ್ಶನದ ಉದ್ದೇಶವಾಗಿತ್ತು.

ಸುಮಾರು ಅರ್ಧ ಗಂಟೆಯ ಅಣಕು ಪ್ರದರ್ಶನದಲ್ಲಿ ಆಂಬುಲೆನ್ಸ್ , ಪೋಲಿಸ್ ಅಧಿಕಾರಿಗಳ ಹಾಗೂ ಸಿಬ್ಬಂದಿ ೩೦ ಮಂದಿ, ಜಿಲ್ಲಾಡಳಿತ
ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ಪರೋಕ್ಷವಾಗಿ ಹಾಗೂ ಪ್ರತ್ಯಕ್ಷವಾಗಿ ಸುಮಾರು ೩೦೦ ಮಂದಿ ಪಾಲ್ಗೊಳ್ಳುವ ಮೂಲಕ ಯಶಸ್ವಿ ಅಣಕು ಪ್ರದರ್ಶನ ಫಲಕಾರಿಯಾಯಿತು.

ಪ್ರದರ್ಶನದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ ಮಂಜುನಾಥಸ್ವಾಮಿ, ಕೆ.ಆರ್.ನಗರ ತಹಶಿಲ್ದಾರರಾದ ಸಂತೋಷ್, ಅಗ್ನಿಶಾಮಕ ಅಧಿಕಾರಿ ಜಯರಾಮಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್,
ಜಿಲ್ಲಾ ಸರ್ವೆಕ್ಷಣಾಧಿಕಾರಿಗಳಾದ ಮಹದೇವಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಮಹೇಂದ್ರಪ್ಪ , ಕೆ.ಆರ್.ನಗರ
ಆರಕ್ಷಕ ನಿರೀಕ್ಷಕರಾದ ಲವ ಸೇರಿದಂತೆ ಇತರೆ
ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಣುಕು ಪ್ರದರ್ಶನದಲ್ಲಿ ಭಾಗವಹಿಸಿದ್ದರು.