ಮನೆ ರಾಜಕೀಯ ಆಗಸ್ಟ್ 2 ರಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮನ

ಆಗಸ್ಟ್ 2 ರಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮನ

0

ಬೆಂಗಳೂರು(Bengaluru): ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಆಗಸ್ಟ್ 2ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಅಂದು   ದೆಹಲಿಯಿಂದ ನೇರವಾಗಿ ಹುಬ್ಬಳ್ಳಿಗೆ ಬರಲಿರುವ ರಾಹುಲ್ ಗಾಂಧಿ ಹುಬ್ಬಳ್ಳಿಯಲ್ಲಿ ರಾತ್ರಿ ಉಳಿದುಕೊಂಡು ನಂತರ ಮರುದಿನ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಅದಕ್ಕೂ ಮೊದಲು ಆ.2ರಂದು ರಾತ್ರಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಲಿದ್ದು, ಪಕ್ಷದ ಹಿರಿಯ ನಾಯಕರ ಜೊತೆ ರಾಜ್ಯ ರಾಜಕೀಯ ವಿದ್ಯಮಾನಗಳ ಮಹತ್ವದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ರಣತಂತ್ರವನ್ನು ರೂಪಿಸಲಿದ್ದಾರೆ. ಜೊತೆಗೆ ಪಕ್ಷದಲ್ಲಿ ಸಿಎಂ ಹುದ್ದೆ ಸಂಬಂಧ ನಾಯಕರಲ್ಲಿ ಉದ್ಭವಿಸಿರುವ ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಎನ್ನಲಾಗಿದೆ.
ಮತ್ತೊಮ್ಮೆ ಒಗ್ಗಟ್ಟಿನ ಪಾಠ ಮಾಡಲಿರುವ ರಾಹುಲ್ ಗಾಂಧಿ ಸಿಎಂ ಗಾಧಿ ಬಗ್ಗೆ ಬಹಿರಂಗ ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆ ಮನವರಿಕೆ ಮಾಡಿಕೊಡಲಿದ್ದಾರೆ. ನಾಯಕರೆಲ್ಲರಿಗೂ ಮನವರಿಕೆ ಮಾಡಿಕೊಡುವ ಮೂಲಕ ಗೊಂದಲಕ್ಕೆ ಅವಕಾಶ ನೀಡದಂತೆ ಸ್ಪಷ್ಟ ಎಚ್ಚರಿಕೆ ನೀಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.