ಬೆಂಗಳೂರು (Bengaluru): ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ.
ಸಿನಿಮಾ ಮೊದಲ ದಿನ ಭಾರತದಲ್ಲೇ 20-22 ಕೋಟಿ ರೂ. ಗಳಿಸಿದೆ. ಕರ್ನಾಟಕದಲ್ಲಿ 13 ಕೋಟಿ ರೂ. ಕಲೆಕ್ಷನ್ ಆಗಿದೆ.
ಅನೂಪ್ ಭಂಡಾರಿ ನಿರ್ದೇಶನದ ಚಿತ್ರಕ್ಕೆ ಸುದೀಪ್ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್ನಲ್ಲಿ ಡಬ್ಬಿಂಗ್ ಮಾಡಿದ್ದಾರೆ. ನಿರೂಪ್ ಭಂಡಾರಿ ಹಾಗೂ ನೀತಾ ಅಶೋಕ್ ಸಹ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈ ಚಿತ್ರದ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು, ರಕೇಲ್ ಡಿಕೋಸ್ಟ ಉರ್ಫ್ ‘ಗಡಂಗ್ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಕೊಂಡಿದ್ದಾರೆ.
ಹಿಂದಿ ಹಾಗೂ ಇತರ ಭಾಷೆಗಳಲ್ಲಿ ಪ್ರಮೋಷನ್ಸ್ ಸೇರಿ ಚಿತ್ರದ ಬಜೆಟ್ 100 ಕೋಟಿ ರೂ. ದಾಟಿದೆ.
ಸಿನಿಮಾ ಬಿಡುಗಡೆಯಾದ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಸುದೀಪ್ ಭೇಟಿಯಾಗಿದ್ದರು. ಮುಂದಿನ ದಿನಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ನೋಡುವುದಾಗಿ ಅವರು ತಿಳಿಸಿದ್ದಾರೆ.