ಮನೆ ಕ್ರೀಡೆ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

0

ನವದೆಹಲಿ (New Delhi): ಜಿಂಬಾಬ್ವೆ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಕ್ರಿಕೆಟ್‌ ಸರಣಿಗೆ ಬಿಸಿಸಿಐ ಭಾರತ ತಂಡ  ಪ್ರಕಟಿಸಿದೆ.

ಸರಣಿಯಿಂದ ಕೆ.ಎಲ್‌ ರಾಹುಲ್‌ ಅವರನ್ನು ಕೈಬಿಡಲಾಗಿದ್ದು, ಶಿಖರ್‌ ಧವನ್‌ಗೆ ನಾಯಕತ್ವವನ್ನು ವಹಿಸಲಾಗಿದೆ. ಮತ್ತೊಂದು ಕಡೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬೂಮ್ರಾ, ರಿಷಭ್‌ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ಇತರ ಅಗ್ರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಈ ಬೆಳವಣಿಗೆಯು ಟಿ20 ವಿಶ್ವಕಪ್‌ನಲ್ಲಿ ಆಡುವ ಅವರ ಅವಕಾಶಗಳಿಗೆ ಅಪಾಯವನ್ನುಂಟುಮಾಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆಗಸ್ಟ್ 18, 20 ಮತ್ತು 22 ರಂದು ಜಿಂಬಾಬ್ವೆಯಲ್ಲಿ ಭಾರತ 3 ಏಕದಿನ ಪಂದ್ಯಗಳನ್ನು ಆಡಲಿದೆ. ಹರಾರೆಯಲ್ಲಿ ಮೊದಲ ಪಂದ್ಯ ನಡೆಯಲಿದೆ.

ಭಾರತ ತಂಡ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ಪಟೇಲ್, ಅವೆಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.