ಮನೆ ಅಪರಾಧ ಕರಾಮುವಿ ಕುಲಪತಿ ಮೇಲೆ ಹಲ್ಲೆ ಆರೋಪ

ಕರಾಮುವಿ ಕುಲಪತಿ ಮೇಲೆ ಹಲ್ಲೆ ಆರೋಪ

0
https://www.youtube.com/channel/UCmDoYGj_oDaxpT_t7Pa9iEQ

ಮೈಸೂರು (Mysuru): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿದ್ಯಾಶಂಕರ್ ಹಾಗೂ ಅವರ ಆಪ್ತ ಸಹಾಯಕ ದೇವರಾಜು ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ಮುಕ್ತ ವಿವಿಯ ಅಸಿಸ್ಟೆಂಟ್ ರಿಜಿಸ್ಟ್ರಾರ್ ಪ್ರದೀಪ್ ಗಿರಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಕರಾಮುವಿ ಪರೀಕ್ಷಾಂಗ ಭವನದ ಕೊಠಡಿಯಲ್ಲಿ ಇಂದು ಮಧ್ಯಾಹ್ನ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಡವಾಗಿ ಕಚೇರಿಗೆ ಬಂದಿದ್ದಕ್ಕೆ ಇವರ ನಡುವೆ ನಡೆದ ಮಾತಿನ ಚಕಮಕಿ ನಡೆದಿದೆ.

ನಂತರ ಕೊಠಡಿಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಸಹಾಯಕ ಕುಲಸಚಿವ ಪ್ರದೀಪ್ ಗಿರಿ ಅವರ ಮುಖ ಹಾಗೂ ಕಿವಿಗೆ ಗಾಯವಾಗಿದೆ.

ಘಟನೆ ನಡೆದ ಬಳಿಕ ಹಲ್ಲೆಗೊಳಗಾದ ಪ್ರದೀಪ್ ಗಿರಿ ಅವರು ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ವೇಳೆ ಪ್ರದೀಪ್ ಗಿರಿ ಅವರನ್ನು ಚಿಕಿತ್ಸೆಗೆಂದು ಕೆ‌.ಆರ್ ಆಸ್ಪತ್ರೆಗೆ ಪೊಲೀಸರು ಕರೆದೊಯ್ದರು. ಜಯಲಕ್ಷ್ಮಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.