ಮನೆ ರಾಷ್ಟ್ರೀಯ ‘ಹರ್ ಘರ್ ತಿರಂಗಾ’ ಬೈಕ್ ರ‍್ಯಾಲಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ

‘ಹರ್ ಘರ್ ತಿರಂಗಾ’ ಬೈಕ್ ರ‍್ಯಾಲಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ

0

ನವದೆಹಲಿ(New Delhi): 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ “ಹರ್ ಘರ್ ತಿರಂಗಾ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿರುವ  ಹರ್ ಘರ್ ತಿರಂಗ ಬೈಕ್ ರ‍್ಯಾಲಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಿದರು.

ಬೈಕ್ ರ್ಯಾಲಿಯು ದೆಹಲಿಯ ಕೆಂಪುಕೋಟೆಯಿಂದ ಆರಂಭಗೊಂಡು ವಿಜಯ್ ಚೌಕ್ ನಲ್ಲಿ ಕೊನೆಗೊಂಡಿತು.

ತ್ರಿವರ್ಣ ಬೈಕ್ ರ‍್ಯಾಲಿಯಲ್ಲಿ ಕೇಂದ್ರ ಸಚಿವರು, ಸಂಸದರು ಭಾಗವಹಿಸಿದ್ದರು. ಸಂಸ್ಕೃತಿ ಸಚಿವಾಲಯದ ವತಿಯಿಂದ ರ‍್ಯಾಲಿ ಆಯೋಜಿಸಲಾಗಿದ್ದು, ಹಿರಿಯ ನಾಯಕರ ಜೊತೆಗೆ ನೂರಾರು ಜನರು ಭಾಗವಹಿಸಿದ್ದರು. ಎಲ್ಲರೂ ತಮ್ಮ ದ್ವಿಚಕ್ರ ವಾಹನಗಳಲ್ಲಿ ತ್ರಿವರ್ಣ ಧ್ವಜವನ್ನಿರಿಸಿ ರ‍್ಯಾಲಿಯಲ್ಲಿ ಭಾಗಿಯಾದರು.

‘ಹರ್ ಘರ್ ತಿರಂಗಾ’ (ಪ್ರತಿ ಮನೆಯಲ್ಲೂ ತ್ರಿವರ್ಣ) ಆಂದೋಲನವನ್ನು ಬಲಪಡಿಸುವಂತೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರದ ಜನತೆಗೆ ಕರೆ ನೀಡಿದ್ದಾರೆ. ಆಗಸ್ಟ್ 13 ಮತ್ತು 15ರ ನಡುವೆ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಅಥವಾ ಪ್ರದರ್ಶಿಸುವಂತೆ ಕರೆ ನೀಡಿದ್ದಾರೆ.